Home / ಕವನ / ಕವಿತೆ / ಸ್ವಾಮಿ ಬಾರೊ

ಸ್ವಾಮಿ ಬಾರೊ

ಸ್ವಾಮಿ ಬಾರೊ ನಿಸ್ಸೀಮ ಬಾರೊ ಶಿವ ಕಂದ ಬಾರೊ ಬಾರೊ
ಜಗದ ಕೀರ್ತಿ ಕಾರ್ತೀಕ ಬಾರೊ ಜಗದಂಬೆ ಕುವರ ಬಾರೊ || ೧ ||

ಕೊರಡು ಚಿಗುರಿ ಕವಲಾಗಿ ಜೀವಸೆಲೆ | ಎಲೆ ಹೂವು ಹಣ್ಣು ಬರಲಿ
ಬರಡು ಭೂಮಿ ಹಸಿರಾಗಿ ಉಸಿರಿಸಲಿ | ಕುಸುರುಕಾಳು ತರಲಿ || ೨ ||

ಶವದಿ ಜೀವ ಉಸಿರಾಡಿ ಓಡಿ | ಚೈತನ್ಯ ಚೆಲುವು ನಗಲಿ
ಜಡದ ಒಡಲು ಬಡಿದೆಬ್ಬಿಸಿದೊಲು ತಾ | ಶಕ್ತಿ ಚಿಲುಮೆ ಉಗಲಿ || ೩ ||

ಶೀತ ಭೀತ ಸಾಗರದಿ ಉರಿಯು | ಅರಿವಾಗಿ ಹೊತ್ತಿಕೊಳಲಿ
ಬರಿಯ ಬಾನಿನಲಿ ಸತ್ಯದರ್ಶನದ | ಭವನ ಕಳಶ ನಿಲಲಿ || ೪ ||

ಕೂಸು ಕುನ್ನಿಗಳು ಪ್ರಬಲವಾಗಲಿ | ಬಡವ ವಡಬನಾಗಿ
ಇಹದ ಸುಖಕೆ ಬಾಯ್ಬಿಡುವ ಯುಕ್ತಿ ತಾ | ಚಿರದ ಭಕ್ತಿಯಾಗಿ || ೫ ||

ಸತ್ತ ಸತ್ಯ ಧರ್ಮಗಳು ಹೊಸ ಬೆಳಕ | ದೀಪವಾಗಿ ಬರಲಿ
ಮಿಥ್ಯವಾದ ಮಲಿನತೆಯು ಕೊಳಕು | ಅದಕೆಣ್ಣೆಯಾಗುತಿರಲಿ || ೬ ||

ಬದ್ಧ ಬುದ್ಧಿಯದು ಮುಕ್ತವಾಗಿ | ಸ್ವಾತಂತ್ರ್ಯ ಸಿದ್ಧಿಯಾಗಿ
ಕಿರಿಯ ಹೃದಯಗಳು ವಿಶ್ವದಗಲ | ಬಾಂಧವ್ಯ ಭವ್ಯವಾಗಿ || ೭ ||

ಶಕ್ತಿ ದಂಡ ಸ್ಪರ್ಶನಕೆ ಸೃಷ್ಟಿಯಲಿ | ಆನಂದ ಚೆಂದ ಚಿಮ್ಮಿ
ನಿನ್ನ ಕೃಪೆಯ ಕಡೆಗಣ್ಣದೃಷ್ಟಿ | ಹರಿಸುತ್ತ ಬಾರೊ ಸ್ವಾಮಿ || ೮ ||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...