ನನ್ನಯ ಪ್ರೀತಿಯನು

ಏನು ಪೇಳಿದನಮ್ಮ ನನ್ನಯ ಪ್ರಿಯನು
ಏನು ಸಂದೇಶವ ನೀ ತಂದೆ ಸಖಿಯೆ || ಪ ||

ಏತಕೆ ಬಾರನೋ ಪ್ರಾಣಪ್ರಿಯನಮ್ಮ
ಕಾತರಿಸಿದೆ ಜೀವಾ ತಾಳಲಾರೆನಮ್ಮ
ಯಾತನೆ ತಾಳೆನು ಮುಳ್ಳ ಮೇಲಿನ ಬಾಳು
ಆತನ ಮಾತೇನು ಪೇಳೆ ಸಖಿ || ೧ ||

ಕಣ್ಣಲಿ ಅವನದೆ ರೂಪವು ಕುಣಿದಿದೆ
ಚೆನ್ನಿಗ ಚೆಲುವಾ ಚೆನ್ನಾಗಿರುವನೆ
ಕಿವಿಯಲಿ ಅವನದೆ ದನಿ ಮಾರ್ದನಿಸಿದೆ
ಸವಿ ನೆನಪೊಂದೇ ಆಸರೆ ನನಗೆ || ೨ ||

ತೀರದ ವಿರಹದಿ ಹಗಲನು ಕಳೆವೆ
ತಾರೆಗಳೆಣಿಸುತ ಇರುಳನು ನೂಕುವೆ
ತೋರದೆ ಮೊಗವನು ಇನ್ನೇಕಿರುವನು
ಬಾರದೆ ನನ್ನೆಡೆ ಏತಕೆ ಕೊಲುವನು || ೩ ||
*****

One thought on “0

  1. ಹೊಸತನವಿದೆ .ಸಂಕಲನದ ಕವಿತೆ ಪ್ರಕಟಿಸಿದ್ಕ್ಕ ಚಿಲುಮೆಗೆ 🙏

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ಗತಿಶೀಲ ಜಗದಲ್ಲಿ
Next post ಕಂಪನಿ ಸವಾಲ್ : ಒಂದು ಓದು

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…