ನನ್ನಯ ಪ್ರೀತಿಯನು

ಏನು ಪೇಳಿದನಮ್ಮ ನನ್ನಯ ಪ್ರಿಯನು
ಏನು ಸಂದೇಶವ ನೀ ತಂದೆ ಸಖಿಯೆ || ಪ ||

ಏತಕೆ ಬಾರನೋ ಪ್ರಾಣಪ್ರಿಯನಮ್ಮ
ಕಾತರಿಸಿದೆ ಜೀವಾ ತಾಳಲಾರೆನಮ್ಮ
ಯಾತನೆ ತಾಳೆನು ಮುಳ್ಳ ಮೇಲಿನ ಬಾಳು
ಆತನ ಮಾತೇನು ಪೇಳೆ ಸಖಿ || ೧ ||

ಕಣ್ಣಲಿ ಅವನದೆ ರೂಪವು ಕುಣಿದಿದೆ
ಚೆನ್ನಿಗ ಚೆಲುವಾ ಚೆನ್ನಾಗಿರುವನೆ
ಕಿವಿಯಲಿ ಅವನದೆ ದನಿ ಮಾರ್ದನಿಸಿದೆ
ಸವಿ ನೆನಪೊಂದೇ ಆಸರೆ ನನಗೆ || ೨ ||

ತೀರದ ವಿರಹದಿ ಹಗಲನು ಕಳೆವೆ
ತಾರೆಗಳೆಣಿಸುತ ಇರುಳನು ನೂಕುವೆ
ತೋರದೆ ಮೊಗವನು ಇನ್ನೇಕಿರುವನು
ಬಾರದೆ ನನ್ನೆಡೆ ಏತಕೆ ಕೊಲುವನು || ೩ ||
*****

One thought on “0

  1. ಹೊಸತನವಿದೆ .ಸಂಕಲನದ ಕವಿತೆ ಪ್ರಕಟಿಸಿದ್ಕ್ಕ ಚಿಲುಮೆಗೆ 🙏

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ಗತಿಶೀಲ ಜಗದಲ್ಲಿ
Next post ಕಂಪನಿ ಸವಾಲ್ : ಒಂದು ಓದು

ಸಣ್ಣ ಕತೆ

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…