ನನ್ನಯ ಪ್ರೀತಿಯನು

ಏನು ಪೇಳಿದನಮ್ಮ ನನ್ನಯ ಪ್ರಿಯನು
ಏನು ಸಂದೇಶವ ನೀ ತಂದೆ ಸಖಿಯೆ || ಪ ||

ಏತಕೆ ಬಾರನೋ ಪ್ರಾಣಪ್ರಿಯನಮ್ಮ
ಕಾತರಿಸಿದೆ ಜೀವಾ ತಾಳಲಾರೆನಮ್ಮ
ಯಾತನೆ ತಾಳೆನು ಮುಳ್ಳ ಮೇಲಿನ ಬಾಳು
ಆತನ ಮಾತೇನು ಪೇಳೆ ಸಖಿ || ೧ ||

ಕಣ್ಣಲಿ ಅವನದೆ ರೂಪವು ಕುಣಿದಿದೆ
ಚೆನ್ನಿಗ ಚೆಲುವಾ ಚೆನ್ನಾಗಿರುವನೆ
ಕಿವಿಯಲಿ ಅವನದೆ ದನಿ ಮಾರ್ದನಿಸಿದೆ
ಸವಿ ನೆನಪೊಂದೇ ಆಸರೆ ನನಗೆ || ೨ ||

ತೀರದ ವಿರಹದಿ ಹಗಲನು ಕಳೆವೆ
ತಾರೆಗಳೆಣಿಸುತ ಇರುಳನು ನೂಕುವೆ
ತೋರದೆ ಮೊಗವನು ಇನ್ನೇಕಿರುವನು
ಬಾರದೆ ನನ್ನೆಡೆ ಏತಕೆ ಕೊಲುವನು || ೩ ||
*****

One thought on “0

  1. ಹೊಸತನವಿದೆ .ಸಂಕಲನದ ಕವಿತೆ ಪ್ರಕಟಿಸಿದ್ಕ್ಕ ಚಿಲುಮೆಗೆ 🙏

Leave a Reply to ಗೋನವಾರ ಕಿಶನ್ ರಾವ Cancel reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ಗತಿಶೀಲ ಜಗದಲ್ಲಿ
Next post ಕಂಪನಿ ಸವಾಲ್ : ಒಂದು ಓದು

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

cheap jordans|wholesale air max|wholesale jordans|wholesale jewelry|wholesale jerseys