Home / ಕವನ / ಕವಿತೆ / ಲೋಕದ ರೀತಿ

ಲೋಕದ ರೀತಿ

ಲೋಕ ನೀತಿ ವಿಧ ವಿಧ ರೀತಿ
ಮೇಲೇ ಕಾಣದು ಸತ್ಯದ ಜ್ಯೋತಿ || ಪ ||

ಕಲ್ಲುಗಳೆಲ್ಲ ರತ್ನಗಳಲ್ಲ
ಮಣ್ಣುಗಳೆಲ್ಲ ಸತ್ವಗಳಲ್ಲ
ಗುಡ್ಡಗಳೆಲ್ಲ ಲೋಹಾದ್ರಿಯಲ್ಲ
ಕಾಡುಗಳೆಲ್ಲ ಶ್ರೀಗಂಧವಲ್ಲ || ೧ ||

ಮೋಡಗಳೆಲ್ಲ ಮಳೆಯವು ಅಲ್ಲ
ಜಾಡುಗಳೆಲ್ಲ ಸತ್ಪಥವಲ್ಲ
ಹೂವುಗಳೆಲ್ಲ ವಾಸನೆಯಲ್ಲ
ಹಣ್ಣುಗಳೆಲ್ಲ ಸಿಹಿರಸವಲ್ಲ || ೨ ||

ಮಂದಿಗಳೆಲ್ಲ ಮಾನವರಲ್ಲ
ಮಾನವರೆಲ್ಲ ಮಹಾತ್ಮರಲ್ಲ
ಕಲಿತವರೆಲ್ಲ ಜಾಣರು ಅಲ್ಲ
ಜಾಣರು ಎಲ್ಲ ಜ್ಞಾನಿಗಳಲ್ಲ || ೩ ||

ದನಗಳು ಎಲ್ಲ ಹೈನುಗಳಲ್ಲ
ಊರುಗಳೆಲ್ಲ ನಂದನವಲ್ಲ
ಹುಟ್ಟಿದ್ದು ಎಲ್ಲ ಶಾಶ್ವತವಲ್ಲ
ಬದುಕುಗಳೆಲ್ಲ ಬಂಗಾರವಲ್ಲ || ೪ ||

ಹೆಣ್ಣುಗಳೆಲ್ಲ ಚೆಲುವೆಯರಲ್ಲ
ಗಂಡುಗಳೆಲ್ಲ ಧೀರರು ಅಲ್ಲ
ಕನಸುಗಳೆಲ್ಲ ಕೈಗೂಡೊದಿಲ್ಲ
ಮನಸುಗಳೆಲ್ಲ ತಿಳಿಹೊಳೆಯಲ್ಲ || ೫ ||

ಪ್ರತಿ ಹಣವೆಲ್ಲ ಬೆವರಿನದಲ್ಲ
ಪ್ರತಿ ನಡೆ ಎಲ್ಲ ಮುನ್ನಡೆಯಲ್ಲ
ಬರೆದದ್ದು ಎಲ್ಲ ಕಾವ್ಯವು ಅಲ್ಲ
ಹಾಡುವುದೆಲ್ಲ ಸಂಗೀತವಲ್ಲ || ೬ ||

ನೋಟಗಳೆಲ್ಲ ಕೂಟಗಳಲ್ಲ
ಕೂಟಗಳೆಲ್ಲ ಸುರತಗಳಲ್ಲ
ಬೀಜಗಳೆಲ್ಲ ಸಂತಾನವಲ್ಲ
ಸಂತತಿ ಎಲ್ಲ ಸಂಸ್ಕಾರವಲ್ಲ || ೭ ||

ಎಳ್ಳಲಿ ಎಣ್ಣೆ ಹಾಲಲಿ ಬೆಣ್ಣೆ
ತೆಂಗಲಿ ನೀರು ಗಣಿಯಲಿ ಚಿನ್ನಾ
ಗೊಳ್ಳಲಿ ತಿರುಳು ಇರುವಾ ರೀತಿ
ಸತ್ಯವು ಸುಲಭಕೆ ಸಿಗದೋ ಅಣ್ಣ || ೮ ||
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...