Home / ಕವನ / ಕವಿತೆ / ಲೋಕದ ರೀತಿ

ಲೋಕದ ರೀತಿ

ಲೋಕ ನೀತಿ ವಿಧ ವಿಧ ರೀತಿ
ಮೇಲೇ ಕಾಣದು ಸತ್ಯದ ಜ್ಯೋತಿ || ಪ ||

ಕಲ್ಲುಗಳೆಲ್ಲ ರತ್ನಗಳಲ್ಲ
ಮಣ್ಣುಗಳೆಲ್ಲ ಸತ್ವಗಳಲ್ಲ
ಗುಡ್ಡಗಳೆಲ್ಲ ಲೋಹಾದ್ರಿಯಲ್ಲ
ಕಾಡುಗಳೆಲ್ಲ ಶ್ರೀಗಂಧವಲ್ಲ || ೧ ||

ಮೋಡಗಳೆಲ್ಲ ಮಳೆಯವು ಅಲ್ಲ
ಜಾಡುಗಳೆಲ್ಲ ಸತ್ಪಥವಲ್ಲ
ಹೂವುಗಳೆಲ್ಲ ವಾಸನೆಯಲ್ಲ
ಹಣ್ಣುಗಳೆಲ್ಲ ಸಿಹಿರಸವಲ್ಲ || ೨ ||

ಮಂದಿಗಳೆಲ್ಲ ಮಾನವರಲ್ಲ
ಮಾನವರೆಲ್ಲ ಮಹಾತ್ಮರಲ್ಲ
ಕಲಿತವರೆಲ್ಲ ಜಾಣರು ಅಲ್ಲ
ಜಾಣರು ಎಲ್ಲ ಜ್ಞಾನಿಗಳಲ್ಲ || ೩ ||

ದನಗಳು ಎಲ್ಲ ಹೈನುಗಳಲ್ಲ
ಊರುಗಳೆಲ್ಲ ನಂದನವಲ್ಲ
ಹುಟ್ಟಿದ್ದು ಎಲ್ಲ ಶಾಶ್ವತವಲ್ಲ
ಬದುಕುಗಳೆಲ್ಲ ಬಂಗಾರವಲ್ಲ || ೪ ||

ಹೆಣ್ಣುಗಳೆಲ್ಲ ಚೆಲುವೆಯರಲ್ಲ
ಗಂಡುಗಳೆಲ್ಲ ಧೀರರು ಅಲ್ಲ
ಕನಸುಗಳೆಲ್ಲ ಕೈಗೂಡೊದಿಲ್ಲ
ಮನಸುಗಳೆಲ್ಲ ತಿಳಿಹೊಳೆಯಲ್ಲ || ೫ ||

ಪ್ರತಿ ಹಣವೆಲ್ಲ ಬೆವರಿನದಲ್ಲ
ಪ್ರತಿ ನಡೆ ಎಲ್ಲ ಮುನ್ನಡೆಯಲ್ಲ
ಬರೆದದ್ದು ಎಲ್ಲ ಕಾವ್ಯವು ಅಲ್ಲ
ಹಾಡುವುದೆಲ್ಲ ಸಂಗೀತವಲ್ಲ || ೬ ||

ನೋಟಗಳೆಲ್ಲ ಕೂಟಗಳಲ್ಲ
ಕೂಟಗಳೆಲ್ಲ ಸುರತಗಳಲ್ಲ
ಬೀಜಗಳೆಲ್ಲ ಸಂತಾನವಲ್ಲ
ಸಂತತಿ ಎಲ್ಲ ಸಂಸ್ಕಾರವಲ್ಲ || ೭ ||

ಎಳ್ಳಲಿ ಎಣ್ಣೆ ಹಾಲಲಿ ಬೆಣ್ಣೆ
ತೆಂಗಲಿ ನೀರು ಗಣಿಯಲಿ ಚಿನ್ನಾ
ಗೊಳ್ಳಲಿ ತಿರುಳು ಇರುವಾ ರೀತಿ
ಸತ್ಯವು ಸುಲಭಕೆ ಸಿಗದೋ ಅಣ್ಣ || ೮ ||
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್