Home / ಕವನ / ಕವಿತೆ / ಲೋಕದ ರೀತಿ

ಲೋಕದ ರೀತಿ

ಲೋಕ ನೀತಿ ವಿಧ ವಿಧ ರೀತಿ
ಮೇಲೇ ಕಾಣದು ಸತ್ಯದ ಜ್ಯೋತಿ || ಪ ||

ಕಲ್ಲುಗಳೆಲ್ಲ ರತ್ನಗಳಲ್ಲ
ಮಣ್ಣುಗಳೆಲ್ಲ ಸತ್ವಗಳಲ್ಲ
ಗುಡ್ಡಗಳೆಲ್ಲ ಲೋಹಾದ್ರಿಯಲ್ಲ
ಕಾಡುಗಳೆಲ್ಲ ಶ್ರೀಗಂಧವಲ್ಲ || ೧ ||

ಮೋಡಗಳೆಲ್ಲ ಮಳೆಯವು ಅಲ್ಲ
ಜಾಡುಗಳೆಲ್ಲ ಸತ್ಪಥವಲ್ಲ
ಹೂವುಗಳೆಲ್ಲ ವಾಸನೆಯಲ್ಲ
ಹಣ್ಣುಗಳೆಲ್ಲ ಸಿಹಿರಸವಲ್ಲ || ೨ ||

ಮಂದಿಗಳೆಲ್ಲ ಮಾನವರಲ್ಲ
ಮಾನವರೆಲ್ಲ ಮಹಾತ್ಮರಲ್ಲ
ಕಲಿತವರೆಲ್ಲ ಜಾಣರು ಅಲ್ಲ
ಜಾಣರು ಎಲ್ಲ ಜ್ಞಾನಿಗಳಲ್ಲ || ೩ ||

ದನಗಳು ಎಲ್ಲ ಹೈನುಗಳಲ್ಲ
ಊರುಗಳೆಲ್ಲ ನಂದನವಲ್ಲ
ಹುಟ್ಟಿದ್ದು ಎಲ್ಲ ಶಾಶ್ವತವಲ್ಲ
ಬದುಕುಗಳೆಲ್ಲ ಬಂಗಾರವಲ್ಲ || ೪ ||

ಹೆಣ್ಣುಗಳೆಲ್ಲ ಚೆಲುವೆಯರಲ್ಲ
ಗಂಡುಗಳೆಲ್ಲ ಧೀರರು ಅಲ್ಲ
ಕನಸುಗಳೆಲ್ಲ ಕೈಗೂಡೊದಿಲ್ಲ
ಮನಸುಗಳೆಲ್ಲ ತಿಳಿಹೊಳೆಯಲ್ಲ || ೫ ||

ಪ್ರತಿ ಹಣವೆಲ್ಲ ಬೆವರಿನದಲ್ಲ
ಪ್ರತಿ ನಡೆ ಎಲ್ಲ ಮುನ್ನಡೆಯಲ್ಲ
ಬರೆದದ್ದು ಎಲ್ಲ ಕಾವ್ಯವು ಅಲ್ಲ
ಹಾಡುವುದೆಲ್ಲ ಸಂಗೀತವಲ್ಲ || ೬ ||

ನೋಟಗಳೆಲ್ಲ ಕೂಟಗಳಲ್ಲ
ಕೂಟಗಳೆಲ್ಲ ಸುರತಗಳಲ್ಲ
ಬೀಜಗಳೆಲ್ಲ ಸಂತಾನವಲ್ಲ
ಸಂತತಿ ಎಲ್ಲ ಸಂಸ್ಕಾರವಲ್ಲ || ೭ ||

ಎಳ್ಳಲಿ ಎಣ್ಣೆ ಹಾಲಲಿ ಬೆಣ್ಣೆ
ತೆಂಗಲಿ ನೀರು ಗಣಿಯಲಿ ಚಿನ್ನಾ
ಗೊಳ್ಳಲಿ ತಿರುಳು ಇರುವಾ ರೀತಿ
ಸತ್ಯವು ಸುಲಭಕೆ ಸಿಗದೋ ಅಣ್ಣ || ೮ ||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...