Home / ಕವನ / ಕವಿತೆ / ಲೋಕದ ರೀತಿ

ಲೋಕದ ರೀತಿ

ಲೋಕ ನೀತಿ ವಿಧ ವಿಧ ರೀತಿ
ಮೇಲೇ ಕಾಣದು ಸತ್ಯದ ಜ್ಯೋತಿ || ಪ ||

ಕಲ್ಲುಗಳೆಲ್ಲ ರತ್ನಗಳಲ್ಲ
ಮಣ್ಣುಗಳೆಲ್ಲ ಸತ್ವಗಳಲ್ಲ
ಗುಡ್ಡಗಳೆಲ್ಲ ಲೋಹಾದ್ರಿಯಲ್ಲ
ಕಾಡುಗಳೆಲ್ಲ ಶ್ರೀಗಂಧವಲ್ಲ || ೧ ||

ಮೋಡಗಳೆಲ್ಲ ಮಳೆಯವು ಅಲ್ಲ
ಜಾಡುಗಳೆಲ್ಲ ಸತ್ಪಥವಲ್ಲ
ಹೂವುಗಳೆಲ್ಲ ವಾಸನೆಯಲ್ಲ
ಹಣ್ಣುಗಳೆಲ್ಲ ಸಿಹಿರಸವಲ್ಲ || ೨ ||

ಮಂದಿಗಳೆಲ್ಲ ಮಾನವರಲ್ಲ
ಮಾನವರೆಲ್ಲ ಮಹಾತ್ಮರಲ್ಲ
ಕಲಿತವರೆಲ್ಲ ಜಾಣರು ಅಲ್ಲ
ಜಾಣರು ಎಲ್ಲ ಜ್ಞಾನಿಗಳಲ್ಲ || ೩ ||

ದನಗಳು ಎಲ್ಲ ಹೈನುಗಳಲ್ಲ
ಊರುಗಳೆಲ್ಲ ನಂದನವಲ್ಲ
ಹುಟ್ಟಿದ್ದು ಎಲ್ಲ ಶಾಶ್ವತವಲ್ಲ
ಬದುಕುಗಳೆಲ್ಲ ಬಂಗಾರವಲ್ಲ || ೪ ||

ಹೆಣ್ಣುಗಳೆಲ್ಲ ಚೆಲುವೆಯರಲ್ಲ
ಗಂಡುಗಳೆಲ್ಲ ಧೀರರು ಅಲ್ಲ
ಕನಸುಗಳೆಲ್ಲ ಕೈಗೂಡೊದಿಲ್ಲ
ಮನಸುಗಳೆಲ್ಲ ತಿಳಿಹೊಳೆಯಲ್ಲ || ೫ ||

ಪ್ರತಿ ಹಣವೆಲ್ಲ ಬೆವರಿನದಲ್ಲ
ಪ್ರತಿ ನಡೆ ಎಲ್ಲ ಮುನ್ನಡೆಯಲ್ಲ
ಬರೆದದ್ದು ಎಲ್ಲ ಕಾವ್ಯವು ಅಲ್ಲ
ಹಾಡುವುದೆಲ್ಲ ಸಂಗೀತವಲ್ಲ || ೬ ||

ನೋಟಗಳೆಲ್ಲ ಕೂಟಗಳಲ್ಲ
ಕೂಟಗಳೆಲ್ಲ ಸುರತಗಳಲ್ಲ
ಬೀಜಗಳೆಲ್ಲ ಸಂತಾನವಲ್ಲ
ಸಂತತಿ ಎಲ್ಲ ಸಂಸ್ಕಾರವಲ್ಲ || ೭ ||

ಎಳ್ಳಲಿ ಎಣ್ಣೆ ಹಾಲಲಿ ಬೆಣ್ಣೆ
ತೆಂಗಲಿ ನೀರು ಗಣಿಯಲಿ ಚಿನ್ನಾ
ಗೊಳ್ಳಲಿ ತಿರುಳು ಇರುವಾ ರೀತಿ
ಸತ್ಯವು ಸುಲಭಕೆ ಸಿಗದೋ ಅಣ್ಣ || ೮ ||
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...