Home / ಕವನ / ಕವಿತೆ / ಎನ್. ಎಸ್. ಎಫ್

ಎನ್. ಎಸ್. ಎಫ್

-ರವಿ ಕೋಟಾರಗಸ್ತಿ

ನಾಗಮಣಿಯಾಗಿ ಬೀರುತ
ದಿವ್ಯ ಶಕ್ತಿಯನು,
ಯಕ್ಷಪ್ರಶ್ನೆಯಾಗಿ ಕೇಳಲಿ
ಇತಿಹಾಸ ದೌರ್ಜನ್ಯವನು,
ಕಡಲಭಾರ್ಗವನಾಗಿ ಸದೆ ಬಡಿಯಲಿ
ಶತ-ಶತಮಾನಗಳ ಶೋಷಣೆಯನು

ಸ್ಟುಪಿಡ್ ರಾಜಕೀಯ ಮೆಟ್ಟಿ ನಿಲ್ಲುತ
ಬಾಂಧವ್ಯದ ಬಾಹುಗಳ ಚಾಚುತಲಿ
ಢಂ ಢಂಮಾರ ಡಮರು ಬಾರಿಸಲಿ
ಸ್ನೇಹ ಸೌಹಾರ್ದತೆ ಬೀರುತ
ಟಕ್-ಟಕ್ ಎನ್ನುವ ಹೃದಯ ಭಾರ
ಹಗುರಗೊಳಿಸುತ ಶಮನಗೊಳಿಸಲಿ

ಪೆಟ್ಟು ಹಾಕುತಿಹದು ಜಾಗೃತ ಗಂಟೆಗೆ
ಢಣ-ಢಣ ನಾದ ಮೊಳಗಿಸುತ
ಪ್ರೀತಿ ಸ್ನೇಹ ಬೆಸೆಯುತಲಿ
ರೇಖೆ ಮೂಡಿಸಲಿ ಸತೀಶ ಸಹೋದರರು
ಶಕ್ತಿ-ಯುಕ್ತಿ ನೊಂದವರ ಬಾಳಿಗೆ.
ಶಂಖನಾದ ಗಗನದುಂಬಿಯಾಗುತ
ವಿಜಯ ಕಹಳೆ ಝೇಂಕರಿಸಲಿ
ನರ ನಾಡಿಗಳಲಿ ತುಂಬಿ ಹರಿಸಲಿ
ಅನೇಕತೆಯಲಿ ಏಕತೆಯು

ಕಲಿಯಿರಿ ಕಲಿಸಿರಿ
ವೇದ ಘೋಷದಡಿಯಲಿ
ಶಿಕ್ಷಣ ಸಂಘಟನೆ ಹೋರಾಟ
ಮಂತ್ರ ಮನನದಿ ಶಕ್ತಿ ತುಂಬುತಿಹುದು
ಶೋಷಿತ ನೊಂದವರ ಕುಡಿಗಳರಳಿಸುವ
ಹೆಮ್ಮೆಯ ಎನ್. ಎಸ್. ಎಫ್. ಸಂಸ್ಥೆಯು

***

 

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...