ಶಿವನ ಅರಮನಿ

ಬಾರ ಪಾತರಗಿತ್ತಿ ಚನ್ನಿ
ನಿನಗ ಯಾತರ ಚಿಂತಿಯು
ಹೂವು ಹೂವಿನ ತೇರು ಎಳಿಯ
ನೀನ ಕಳಸದ ಗಿತ್ತಿಯು

ಹಸಿರು ಹೂವು ಗುಡ್ಡ ಬೆಟ್ಟಾ
ನಿನ್ನ ಮಂಚಾ ತೂಗ್ಯವ
ಮುಗುಲ ಮ್ಯಾಲಿನ ತಂಪುಗಾಳಿ
ನಿನ್ನ ಪಕ್ಕಾ ತೊಳೆದವ

ದೇವರಾಯನ ಮನಿಯ ತೋರ
ನೀನ ಪಾರ್‍ವತಿ ರೂಪಸಿ
ನೀನ ಊರ್‍ವಸಿ ನೀನ ಮೇನಕಿ
ಜೀವ ಚೇತನ ರಸಮತಿ

ನಿನ್ನ ರೆಕ್ಕಿಯ ಮ್ಯಾಗ ಹತ್ತಲೆ
ಬ್ರಹ್ಮ ತತ್ತ್ವಕ ಹಾರಲೆ
ನಿನ್ನ ಡುಬ್ಬಕ ಹತ್ತಿ ನಿಲ್ಲಲೆ
ಶಿವನ ಅರಮನಿ ಸೇರಲೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಗ ಮಾಡಿದ್ದು
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೮

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…