ಬಸವ ಚೇತನ ಕನಸು ಚಿಮ್ಮಲಿ

ಬನ್ನಿ ಬನ್ನಿರಿ ದೇವ ತರುಗಳೆ
ನಗುವ ಮಲ್ಲಿಗೆ ಹೂಗಳೆ
ಬನ್ನಿ ಬನ್ನಿರಿ ಹೂವು ತನ್ನಿರಿ
ಸಹಜ ಸುಂದರ ಮಣಿಗಳೆ

ಬಸವ ಚೇತನ ಕನಸು ಚಿಮ್ಮಲಿ
ಲಿಂಗ ಗೊಂಚಲು ಹೊಮ್ಮಲಿ
ಶಿವನ ಬೆಳಗು ಹಬ್ಬಿಹರಡಲಿ
ವಿಶ್ವ ಸುಂದರವಾಗಲಿ

ದೇವನೊಬ್ಬನು ನಾಮ ಹಲವು
ಮನುಜ ಮಂಚವ ತೂಗುವಾ
ನಾವು ಸಕಲರು ಸೋದರಾತ್ಮರು
ಸತ್ಯ ಘೋಷಣೆ ಕೂಗುವಾ

ಮುಳ್ಳು ಹೋಗಲಿ ಹೂವು ಅರಳಲಿ
ಹಾಲುಜೇನು ಹರಿಯಲಿ
ಸಕಲ ಜೀವಾತ್ಮರರ ಲೇಸನೆ
ಶರಣ ಮಂತ್ರವು ಬೆಳಗಲಿ
ವಿಶ್ವ ಮಂದಿರವಾಗಲಿ
ಜೀವ ಜಂಗಮ ತೂಗಲಿಽಽಽ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಷ್ಟ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೨

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…