ಅಂತರಂಗದ ಹೂವು ಅರಳಿತು

ಅಂತರಂಗದ ಹೂವು ಅರಳಿತು
ಶಿವನ ಸುಂದರ ಮಿಲನದಿ
ಜಡವು ಜಾರಿತು ಜ್ಯೋತಿ ಚಿಮ್ಮಿತು
ಜ್ಞಾನ ಸೂರ್ಯನ ಉದಯದಿ

ನಶೆಯು ಏರಿತು ಖುಶಿಯು ತುಂಬಿತು
ಮೌನದಾರತಿ ಬೆಳಗಿತು
ಬಿಂದು ರೂಪದ ಜ್ಯೋತಿ ಅರಳಿತು
ಸಿಂಧು ರೂಪವ ಬೆರೆಯಿತು

ಹಾಲುಜೇನು ಕಾಮಧೇನು
ಹೃದಯ ಹೂಬನವಾಯಿತು
ಪ್ರೀತಿ ಪುಷ್ಪಾ ರೀತಿ ಪರಿಮಳ
ಪ್ರೇಮ ಯಾತ್ರೆಯ ತುಂಬಿತು

ನಂಬಿ ಕರೆದರೆ ತುಂಬಿ ಬಂದನು
ಸುಂದರೇಶ್ವರ ಶ್ರೀಗುರು
ಆತ್ಮ ರಂಗದಿ ರಾಗ ತುಂಬುತ
ಕುಣಿದು ಹಾಡಿದ ನಿಜಗುರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀಲವೇಣಿ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೭

ಸಣ್ಣ ಕತೆ

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…