ಚೆಲುವಿನ ಗುಲಾಬಿ ಎಂದೂ ತೀರದಿರಲೆಂದೆ

ಚೆಲುವಿನ ಗುಲಾಬಿ ಎಂದೂ ತೀರದಿರಲೆಂದೆ
ಸುಂದರ ತಳಿಗಳೆಲ್ಲ ವೃದ್ದಿಸಲಿ ಎನ್ನುವುದು,
ಹಣ್ಣಾದದ್ದೆಲ್ಲವೂ ಮಣ್ಣಿಗುರುಳುವ ಮುಂಚೆ
ನೆನಪನುಳಿಸಲು ತನ್ನ ಕುಡಿಯನ್ನು ಪಡೆಯುವುದು.
ನೀನೊ ನಿನ್ನದೆ ಕಣ್ಣಕಾಂತಿಯಲಿ ಬಂಧಿತ,
ನಿನ್ನ ಚೆಲುವಿನ ಉರಿಗೆ ಆತ್ಮತೈಲವ ಎರೆವೆ,
ಸಮೃದ್ಧಿ ಇರುವ ಕಡೆ ಕ್ಷಾಮವನು ತೆರೆಯುತ್ತ
ನಿನಗೆ ನೀನೆ ಕ್ರೂರಶತ್ರುವಾಗುತ್ತಿರುವೆ.
ಇಳೆಯ ಹೊಸ ಆಭರಣ ನೀನು, ನಿನ್ನೀ ಅಂದ
ಸಿರಿವಸಂತದ ಸನ್ನೆ, ನಿನ್ನ ಸತ್ವವನೆಲ್ಲ
ಮೊಗ್ಗಿನೊಳಗೇ ಹುಗಿಯಬೇಡ ಜಿಪುಣತೆಯಿಂದ,
ಎಳೆಜುಗ್ಗ ವ್ಯರ್ಥಗೊಳಿಸದಿರು ಚೆಲುವನ್ನೆಲ್ಲ,
ಮರುಗು ಲೋಕಕ್ಕೆ, ಇಲ್ಲವೆ ಹೊಟ್ಟೆಬಾಕನೇ,
ಭಕ್ಷಿಸುವೆ ಜಗದ ಪಾಲನ್ನೆ ನೀ ನಿನ್ನನೇ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್

Sonnet 1
From fairest creatures we desire increase…

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭ್ರಮಣ – ೧೭
Next post ಕನಸಾಗುತ್ತದೆ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…