ನಲವತ್ತು ಚಳಿಗಾಲಗಳ ಸತತ ದಾಳಿಗೆ ಹೂಡಿ

ನಲವತ್ತು ಚಳಿಗಾಲಗಳ ಸತತ ದಾಳಿಗೆ ಹೂಡಿ
ನಿನ್ನ ಚೆಲುಮೈಯ ಬಯಲಲ್ಲಿ ಕುಳಿಗಳು ತೆರೆದು,
ಜನ ಮೆಚ್ಚಿ ದಿಟ್ಟಿಸುವ ಹರೆಯದೀ ಸಿರಿತೊಡಿಗೆ
ಏನೇನೂ ಬೆಲೆಯಿರದ ಹರಕು ಜೂಲಾಗುವುದು.
ನಿನ್ನ ಹಿಂದಿನ ಚೆಲುವದೆಲ್ಲಿ, ಜ್ವಲಿಸುವ ಹರೆಯ
ತಂದ ಸಂಪತ್ತೆಲ್ಲಿ? ಎ೦ದು ಕೇಳಿದರೆನ್ನು.
ನೋಡು ಈ ಕುಳಿಬಿದ್ದ ಕಣ್ಣನ್ನು ಎನ್ನುವೆಯ?
ಎಂಥ ನಾಚಿಕೆಗೇಡು! ಅದು ಹೊಗಳಿಕೆಯೆ? ಮಣ್ಣು!
ನೋಡಿ ಈ ನನ್ನ ಮುದ್ದಿನ ಕಂದ, ಈ ಚೆಲುವು
ನನ್ನ ವೃದ್ಧಾಪ್ಯಕ್ಕೆ ನಾನಿತ್ತ ಪರಿಹಾರ
ಎನಲಾಗುವಂತೆ ಮೈ ಬಳಸಿದೆಯೊ ಅದು ಗೆಲುವು!
ನಿನ್ನ ಮಗು ನಿನ್ನ ಚೆಲುವನ್ನು ಉಳಿಸುವ ವರ.
ಮುದುಕನಾಗುವನಿಗಿದು ಕಾಯಕಲ್ಪದ ಹಾಗೆ,
ಚಳಿಯಲ್ಲು ಒಳಗೆ ಬಿಸಿರಕ್ತ ಉಕ್ಕುವ ಹಾಗೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್

Sonnet 2
When forty winters shall besiege thy brow…

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ವಪ್ನ ಮಂಟಪ – ೧
Next post ಸಾಲ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys