Home / ಲೇಖನ / ವಿಜ್ಞಾನ / ಅತ್ಯಂತ ಚಿಕ್ಕ ಮುದ್ರಣ ಯಂತ್ರ

ಅತ್ಯಂತ ಚಿಕ್ಕ ಮುದ್ರಣ ಯಂತ್ರ

ನಾವು ಮುದ್ರಣ ಯಂತ್ರಗಳಲ್ಲಿ ಹೊಸ ಆವಿಷ್ಕಾರಗಳನ್ನು ಕಾಣುತ್ತೇವೆ. ವಿದ್ಯುತ್‌ಯಂತ್ರದಿಂದ ಕಂಪ್ಯೂಟರ್ ಪ್ರಿಂಟರ್‌ವರೆಗೆ ಹೀಗೆ ಹೊಸ ಮೂನೆಗಳನ್ನು ಕಂಡಿದ್ದೇವೆ. ಹೊಸ ಸಂಶೋಧನೆಗಳಿಗೆ ಹೆಸರಾದ ಜಪಾನ್ ದೇಶದ ಸಿಟಿಜನ್ ವಾಚ್ ಕಂಪನಿಯು ಅತ್ಯಂತ ಸಣ್ಣಮುದ್ರಣ ಯಂತ್ರವನ್ನು ಕಂಡು ಹಿಡಿದಿದೆ. ಮತ್ತು ಬಹಳ ಹಗುರ ಕೂಡ ಇದೆ. (P.G. ಪ್ರಿಂಟರ್) ಇದಕ್ಕೆ P.N.60 ಎಂದು ಕರೆಯುತ್ತಾರೆ. ಇದರ ಉದ್ದಳತೆ ಎತ್ತರ ಹೀಗಿದೆ. 254-47-51 ಮಿಲಿಮೀಟರ್ಗಳು ಮತ್ತು‌ಈ ಯಂತ್ರದ ತೂಕ ಕೇವಲ 500 ಗ್ರಾಂ. ವ್ಯಾಪಾರಿಗಳಿಗೆ, ವ್ರವಾಸ ಕಾಲಕ್ಕೆ ಅತ್ಯಂತ ಉಪಯುಕ್ತವಾಗಲಿದೆ. ಲ್ಯಾಪ್‌ಟಾಪ್ ಕಂಪ್ಯೂಟರ್ ಸಂಗಡ ಪ್ರವಾಸ ಮಾಡುವವರಿಗೆ ಈ ಯಂತ್ರದ ಉಪಯೋಗವಾಗುತ್ತದೆ. ಒಂದು ನಿಮಿಷದಲ್ಲಿ ಎರಡು ಪುಟಗಳನ್ನು ಬಣ್ಣದಲ್ಲಿ ಮುದ್ರಿಸಬಹುದಾಗಿದೆ. ಬ್ಯಾಟರಿಯಿಂದ ನಡೆಯುವ ಈ ಯಂತ್ರ ಒಂದು ಸಲ ಹಾಕಿದ ಬ್ಯಾಟರಿಯಿಂದ ೫೦ ಹಾಳೆಗಳನ್ನು ಮುದ್ರಿಸಲು ಸಾಧ್ಯ. ಇದರ ಬೆಲೆ ಕೇವಲ ೫೦೦ ಡಾಲರ್ ಮಾತ್ರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...