Home / ಕವನ / ಕವಿತೆ / ನಿರಾಶಿತೆ

ನಿರಾಶಿತೆ

ಕರ್ತವ್ಯದ ನೆಪದಲ್ಲಿ
ಅತ್ಯಾಚಾರ ಮಾಡುವ ಹೆತ್ತವರು
ಕತ್ತೆಯೊಂದಕ್ಕೆ ಗಂಟು ಹಾಕಿದರೂ
ಏನು ಮಾಡುವುದು ಹಣೆ ಬರಹವೆಂಬ
ತಲೆ ಬುಡವೇ ಇಲ್ಲದ ಬುದ್ಧಿಗೇಡಿ ತತ್ವಕ್ಕೆ ಶರಣಾಗದೆ
ನಿಷ್ಠೆ, ಒಳ್ಳೆತನದ ಸೋಗು ಹಾಕಿ
ಬೆಂಕಿ ಬಿದ್ದ ಹತ್ತಿಯಂತೆ ಹಾಳಾಗಲೊಲ್ಲದೆ
ಪ್ರೇತ ಬದುಕಿಗೆ ತಲೆ ಕೊಡದೆ
ಹಿತ ಶತ್ರುಗಳ ಪಂಜರದಿಂದ ಪಾರಾಗಿ ಒಲುಮೆಯ ಬದುಕನರಸಿ
ಹೊರ ಹೊರಟೆ.

ಬೆಳದಿಂಗಳಲ್ಲಿ ಉಂಡು
ಸವಿಯಾದ ತಾಂಬೂಲ ತಿಂದು
ಕೆಂಪು ತುಟಿಗಳ ಸ್ಪರ್ಧೆ ನಡೆಸಿದೆವು ಸುಖದ ಬಿಸಿಯನ್ನು ಸವಿದೆವು :
ಇರುಳು ಹಗಲುಗಳ ಉದ್ದ ಗಾತ್ರಗಳನಳೆದೆವು

ಕುಣಿ ಕುಣಿಯುತ್ತ ಬಂತು ಬೇಸಿಗೆ
ನೀರು ನೆರಳನ್ನು ಹಾರೈಸಿ
ಅತ್ತಿತ್ತ ನೋಡಿದರೆ
ಊರು ತುಂಬಾ ಬರಿ ಜಾಲಿ, ಬ್ಯಾಲ
ಬೇಲಿಯೊಳಗೆ ಭದ್ರವಾಗಿರುವ ತೋಟ ತುಡಿಕೆಗಳು
ಮುಕ್ತ ಆಶ್ರಯ ತಾಣ ಒಂದೂ ಕಂಡು ಬರಲಿಲ್ಲ.

ಕೆಟ್ಟ ಕೆಟ್ಟ ಕನಸುಗಳು ಬೀಳಲಾರಂಭಿಸಿ
ಭಯವಾಗಿ ನಡುಕ ಗದಗುಡಿಸ ತೊಡಗಿತು.
ಪಾಪ ಪ್ರಜ್ಞೆಯ ಭೂತ ನೃತ್ಯವು ಸಾಗಿ
ಬಾರಿ ಬಾರಿಗೂ ತಪ್ಪಾಯಿತೆನಿಸಿತು
ಮನಸು ‘ತಬ್ಬಲಿ’ ‘ತಬ್ಬಲಿ’ ಯೆಂದು ಚೀರ ತೊಡಗಿತು.

ಅನ್ನ ವಿಷವಾಯಿತು
ಬದುಕು ನಿಸ್ಸಾರವಾಯಿತು
ಅಂಗಿದ್ದರೇನು? ಇಂಗಿದ್ದರೇನು?
ಹ್ಯಾಗಿದ್ದರೇನು?
ಕರೆವವರೆ? ಕಳುವವರೆ?
ನೋಡುವವರೆ? ನಲಿವವರೆ?
ನಮಗೆ ಯಾರಿದ್ದಾರೆ?
‘ಇದೊಂದು ಜೀವನಾನ?’ ಎನ್ನಿಸಿ
ಆಸೆಯೇ ಇಮರಿ ಹೋಯಿತು.

ಅನ್ನೋ ಹಾಗಿಲ್ಲ ಅನುಭವಿಸೋ ಹಾಗಿಲ್ಲ
ಬನ್ನ ಬವಣೆ ಅಂತಗೊಣಗುವಂತಿಲ್ಲ
ಚೆನ್ನಿಗ ನನ್ನವನಿಗೂ ಹೀಗೆ ಅನ್ನಿಸುತ್ತಿರಬೇಕು ಎಲ್ಲಾ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...