Home / ಕವನ / ಕವಿತೆ / ನಿರಾಶಿತೆ

ನಿರಾಶಿತೆ

ಕರ್ತವ್ಯದ ನೆಪದಲ್ಲಿ
ಅತ್ಯಾಚಾರ ಮಾಡುವ ಹೆತ್ತವರು
ಕತ್ತೆಯೊಂದಕ್ಕೆ ಗಂಟು ಹಾಕಿದರೂ
ಏನು ಮಾಡುವುದು ಹಣೆ ಬರಹವೆಂಬ
ತಲೆ ಬುಡವೇ ಇಲ್ಲದ ಬುದ್ಧಿಗೇಡಿ ತತ್ವಕ್ಕೆ ಶರಣಾಗದೆ
ನಿಷ್ಠೆ, ಒಳ್ಳೆತನದ ಸೋಗು ಹಾಕಿ
ಬೆಂಕಿ ಬಿದ್ದ ಹತ್ತಿಯಂತೆ ಹಾಳಾಗಲೊಲ್ಲದೆ
ಪ್ರೇತ ಬದುಕಿಗೆ ತಲೆ ಕೊಡದೆ
ಹಿತ ಶತ್ರುಗಳ ಪಂಜರದಿಂದ ಪಾರಾಗಿ ಒಲುಮೆಯ ಬದುಕನರಸಿ
ಹೊರ ಹೊರಟೆ.

ಬೆಳದಿಂಗಳಲ್ಲಿ ಉಂಡು
ಸವಿಯಾದ ತಾಂಬೂಲ ತಿಂದು
ಕೆಂಪು ತುಟಿಗಳ ಸ್ಪರ್ಧೆ ನಡೆಸಿದೆವು ಸುಖದ ಬಿಸಿಯನ್ನು ಸವಿದೆವು :
ಇರುಳು ಹಗಲುಗಳ ಉದ್ದ ಗಾತ್ರಗಳನಳೆದೆವು

ಕುಣಿ ಕುಣಿಯುತ್ತ ಬಂತು ಬೇಸಿಗೆ
ನೀರು ನೆರಳನ್ನು ಹಾರೈಸಿ
ಅತ್ತಿತ್ತ ನೋಡಿದರೆ
ಊರು ತುಂಬಾ ಬರಿ ಜಾಲಿ, ಬ್ಯಾಲ
ಬೇಲಿಯೊಳಗೆ ಭದ್ರವಾಗಿರುವ ತೋಟ ತುಡಿಕೆಗಳು
ಮುಕ್ತ ಆಶ್ರಯ ತಾಣ ಒಂದೂ ಕಂಡು ಬರಲಿಲ್ಲ.

ಕೆಟ್ಟ ಕೆಟ್ಟ ಕನಸುಗಳು ಬೀಳಲಾರಂಭಿಸಿ
ಭಯವಾಗಿ ನಡುಕ ಗದಗುಡಿಸ ತೊಡಗಿತು.
ಪಾಪ ಪ್ರಜ್ಞೆಯ ಭೂತ ನೃತ್ಯವು ಸಾಗಿ
ಬಾರಿ ಬಾರಿಗೂ ತಪ್ಪಾಯಿತೆನಿಸಿತು
ಮನಸು ‘ತಬ್ಬಲಿ’ ‘ತಬ್ಬಲಿ’ ಯೆಂದು ಚೀರ ತೊಡಗಿತು.

ಅನ್ನ ವಿಷವಾಯಿತು
ಬದುಕು ನಿಸ್ಸಾರವಾಯಿತು
ಅಂಗಿದ್ದರೇನು? ಇಂಗಿದ್ದರೇನು?
ಹ್ಯಾಗಿದ್ದರೇನು?
ಕರೆವವರೆ? ಕಳುವವರೆ?
ನೋಡುವವರೆ? ನಲಿವವರೆ?
ನಮಗೆ ಯಾರಿದ್ದಾರೆ?
‘ಇದೊಂದು ಜೀವನಾನ?’ ಎನ್ನಿಸಿ
ಆಸೆಯೇ ಇಮರಿ ಹೋಯಿತು.

ಅನ್ನೋ ಹಾಗಿಲ್ಲ ಅನುಭವಿಸೋ ಹಾಗಿಲ್ಲ
ಬನ್ನ ಬವಣೆ ಅಂತಗೊಣಗುವಂತಿಲ್ಲ
ಚೆನ್ನಿಗ ನನ್ನವನಿಗೂ ಹೀಗೆ ಅನ್ನಿಸುತ್ತಿರಬೇಕು ಎಲ್ಲಾ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...