ನಿರಾಶಿತೆ

ಕರ್ತವ್ಯದ ನೆಪದಲ್ಲಿ
ಅತ್ಯಾಚಾರ ಮಾಡುವ ಹೆತ್ತವರು
ಕತ್ತೆಯೊಂದಕ್ಕೆ ಗಂಟು ಹಾಕಿದರೂ
ಏನು ಮಾಡುವುದು ಹಣೆ ಬರಹವೆಂಬ
ತಲೆ ಬುಡವೇ ಇಲ್ಲದ ಬುದ್ಧಿಗೇಡಿ ತತ್ವಕ್ಕೆ ಶರಣಾಗದೆ
ನಿಷ್ಠೆ, ಒಳ್ಳೆತನದ ಸೋಗು ಹಾಕಿ
ಬೆಂಕಿ ಬಿದ್ದ ಹತ್ತಿಯಂತೆ ಹಾಳಾಗಲೊಲ್ಲದೆ
ಪ್ರೇತ ಬದುಕಿಗೆ ತಲೆ ಕೊಡದೆ
ಹಿತ ಶತ್ರುಗಳ ಪಂಜರದಿಂದ ಪಾರಾಗಿ ಒಲುಮೆಯ ಬದುಕನರಸಿ
ಹೊರ ಹೊರಟೆ.

ಬೆಳದಿಂಗಳಲ್ಲಿ ಉಂಡು
ಸವಿಯಾದ ತಾಂಬೂಲ ತಿಂದು
ಕೆಂಪು ತುಟಿಗಳ ಸ್ಪರ್ಧೆ ನಡೆಸಿದೆವು ಸುಖದ ಬಿಸಿಯನ್ನು ಸವಿದೆವು :
ಇರುಳು ಹಗಲುಗಳ ಉದ್ದ ಗಾತ್ರಗಳನಳೆದೆವು

ಕುಣಿ ಕುಣಿಯುತ್ತ ಬಂತು ಬೇಸಿಗೆ
ನೀರು ನೆರಳನ್ನು ಹಾರೈಸಿ
ಅತ್ತಿತ್ತ ನೋಡಿದರೆ
ಊರು ತುಂಬಾ ಬರಿ ಜಾಲಿ, ಬ್ಯಾಲ
ಬೇಲಿಯೊಳಗೆ ಭದ್ರವಾಗಿರುವ ತೋಟ ತುಡಿಕೆಗಳು
ಮುಕ್ತ ಆಶ್ರಯ ತಾಣ ಒಂದೂ ಕಂಡು ಬರಲಿಲ್ಲ.

ಕೆಟ್ಟ ಕೆಟ್ಟ ಕನಸುಗಳು ಬೀಳಲಾರಂಭಿಸಿ
ಭಯವಾಗಿ ನಡುಕ ಗದಗುಡಿಸ ತೊಡಗಿತು.
ಪಾಪ ಪ್ರಜ್ಞೆಯ ಭೂತ ನೃತ್ಯವು ಸಾಗಿ
ಬಾರಿ ಬಾರಿಗೂ ತಪ್ಪಾಯಿತೆನಿಸಿತು
ಮನಸು ‘ತಬ್ಬಲಿ’ ‘ತಬ್ಬಲಿ’ ಯೆಂದು ಚೀರ ತೊಡಗಿತು.

ಅನ್ನ ವಿಷವಾಯಿತು
ಬದುಕು ನಿಸ್ಸಾರವಾಯಿತು
ಅಂಗಿದ್ದರೇನು? ಇಂಗಿದ್ದರೇನು?
ಹ್ಯಾಗಿದ್ದರೇನು?
ಕರೆವವರೆ? ಕಳುವವರೆ?
ನೋಡುವವರೆ? ನಲಿವವರೆ?
ನಮಗೆ ಯಾರಿದ್ದಾರೆ?
‘ಇದೊಂದು ಜೀವನಾನ?’ ಎನ್ನಿಸಿ
ಆಸೆಯೇ ಇಮರಿ ಹೋಯಿತು.

ಅನ್ನೋ ಹಾಗಿಲ್ಲ ಅನುಭವಿಸೋ ಹಾಗಿಲ್ಲ
ಬನ್ನ ಬವಣೆ ಅಂತಗೊಣಗುವಂತಿಲ್ಲ
ಚೆನ್ನಿಗ ನನ್ನವನಿಗೂ ಹೀಗೆ ಅನ್ನಿಸುತ್ತಿರಬೇಕು ಎಲ್ಲಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಣೆಯಾಗಿದೆ ಬಾಲ್ಯ
Next post ಕಣ್ಮರೆ

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…