Home / ಕವನ / ಕವಿತೆ / ನಿರಾಶಿತೆ

ನಿರಾಶಿತೆ

ಕರ್ತವ್ಯದ ನೆಪದಲ್ಲಿ
ಅತ್ಯಾಚಾರ ಮಾಡುವ ಹೆತ್ತವರು
ಕತ್ತೆಯೊಂದಕ್ಕೆ ಗಂಟು ಹಾಕಿದರೂ
ಏನು ಮಾಡುವುದು ಹಣೆ ಬರಹವೆಂಬ
ತಲೆ ಬುಡವೇ ಇಲ್ಲದ ಬುದ್ಧಿಗೇಡಿ ತತ್ವಕ್ಕೆ ಶರಣಾಗದೆ
ನಿಷ್ಠೆ, ಒಳ್ಳೆತನದ ಸೋಗು ಹಾಕಿ
ಬೆಂಕಿ ಬಿದ್ದ ಹತ್ತಿಯಂತೆ ಹಾಳಾಗಲೊಲ್ಲದೆ
ಪ್ರೇತ ಬದುಕಿಗೆ ತಲೆ ಕೊಡದೆ
ಹಿತ ಶತ್ರುಗಳ ಪಂಜರದಿಂದ ಪಾರಾಗಿ ಒಲುಮೆಯ ಬದುಕನರಸಿ
ಹೊರ ಹೊರಟೆ.

ಬೆಳದಿಂಗಳಲ್ಲಿ ಉಂಡು
ಸವಿಯಾದ ತಾಂಬೂಲ ತಿಂದು
ಕೆಂಪು ತುಟಿಗಳ ಸ್ಪರ್ಧೆ ನಡೆಸಿದೆವು ಸುಖದ ಬಿಸಿಯನ್ನು ಸವಿದೆವು :
ಇರುಳು ಹಗಲುಗಳ ಉದ್ದ ಗಾತ್ರಗಳನಳೆದೆವು

ಕುಣಿ ಕುಣಿಯುತ್ತ ಬಂತು ಬೇಸಿಗೆ
ನೀರು ನೆರಳನ್ನು ಹಾರೈಸಿ
ಅತ್ತಿತ್ತ ನೋಡಿದರೆ
ಊರು ತುಂಬಾ ಬರಿ ಜಾಲಿ, ಬ್ಯಾಲ
ಬೇಲಿಯೊಳಗೆ ಭದ್ರವಾಗಿರುವ ತೋಟ ತುಡಿಕೆಗಳು
ಮುಕ್ತ ಆಶ್ರಯ ತಾಣ ಒಂದೂ ಕಂಡು ಬರಲಿಲ್ಲ.

ಕೆಟ್ಟ ಕೆಟ್ಟ ಕನಸುಗಳು ಬೀಳಲಾರಂಭಿಸಿ
ಭಯವಾಗಿ ನಡುಕ ಗದಗುಡಿಸ ತೊಡಗಿತು.
ಪಾಪ ಪ್ರಜ್ಞೆಯ ಭೂತ ನೃತ್ಯವು ಸಾಗಿ
ಬಾರಿ ಬಾರಿಗೂ ತಪ್ಪಾಯಿತೆನಿಸಿತು
ಮನಸು ‘ತಬ್ಬಲಿ’ ‘ತಬ್ಬಲಿ’ ಯೆಂದು ಚೀರ ತೊಡಗಿತು.

ಅನ್ನ ವಿಷವಾಯಿತು
ಬದುಕು ನಿಸ್ಸಾರವಾಯಿತು
ಅಂಗಿದ್ದರೇನು? ಇಂಗಿದ್ದರೇನು?
ಹ್ಯಾಗಿದ್ದರೇನು?
ಕರೆವವರೆ? ಕಳುವವರೆ?
ನೋಡುವವರೆ? ನಲಿವವರೆ?
ನಮಗೆ ಯಾರಿದ್ದಾರೆ?
‘ಇದೊಂದು ಜೀವನಾನ?’ ಎನ್ನಿಸಿ
ಆಸೆಯೇ ಇಮರಿ ಹೋಯಿತು.

ಅನ್ನೋ ಹಾಗಿಲ್ಲ ಅನುಭವಿಸೋ ಹಾಗಿಲ್ಲ
ಬನ್ನ ಬವಣೆ ಅಂತಗೊಣಗುವಂತಿಲ್ಲ
ಚೆನ್ನಿಗ ನನ್ನವನಿಗೂ ಹೀಗೆ ಅನ್ನಿಸುತ್ತಿರಬೇಕು ಎಲ್ಲಾ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...