Home / ಕವನ / ಕವಿತೆ / ನಿರಾಶಿತೆ

ನಿರಾಶಿತೆ

ಕರ್ತವ್ಯದ ನೆಪದಲ್ಲಿ
ಅತ್ಯಾಚಾರ ಮಾಡುವ ಹೆತ್ತವರು
ಕತ್ತೆಯೊಂದಕ್ಕೆ ಗಂಟು ಹಾಕಿದರೂ
ಏನು ಮಾಡುವುದು ಹಣೆ ಬರಹವೆಂಬ
ತಲೆ ಬುಡವೇ ಇಲ್ಲದ ಬುದ್ಧಿಗೇಡಿ ತತ್ವಕ್ಕೆ ಶರಣಾಗದೆ
ನಿಷ್ಠೆ, ಒಳ್ಳೆತನದ ಸೋಗು ಹಾಕಿ
ಬೆಂಕಿ ಬಿದ್ದ ಹತ್ತಿಯಂತೆ ಹಾಳಾಗಲೊಲ್ಲದೆ
ಪ್ರೇತ ಬದುಕಿಗೆ ತಲೆ ಕೊಡದೆ
ಹಿತ ಶತ್ರುಗಳ ಪಂಜರದಿಂದ ಪಾರಾಗಿ ಒಲುಮೆಯ ಬದುಕನರಸಿ
ಹೊರ ಹೊರಟೆ.

ಬೆಳದಿಂಗಳಲ್ಲಿ ಉಂಡು
ಸವಿಯಾದ ತಾಂಬೂಲ ತಿಂದು
ಕೆಂಪು ತುಟಿಗಳ ಸ್ಪರ್ಧೆ ನಡೆಸಿದೆವು ಸುಖದ ಬಿಸಿಯನ್ನು ಸವಿದೆವು :
ಇರುಳು ಹಗಲುಗಳ ಉದ್ದ ಗಾತ್ರಗಳನಳೆದೆವು

ಕುಣಿ ಕುಣಿಯುತ್ತ ಬಂತು ಬೇಸಿಗೆ
ನೀರು ನೆರಳನ್ನು ಹಾರೈಸಿ
ಅತ್ತಿತ್ತ ನೋಡಿದರೆ
ಊರು ತುಂಬಾ ಬರಿ ಜಾಲಿ, ಬ್ಯಾಲ
ಬೇಲಿಯೊಳಗೆ ಭದ್ರವಾಗಿರುವ ತೋಟ ತುಡಿಕೆಗಳು
ಮುಕ್ತ ಆಶ್ರಯ ತಾಣ ಒಂದೂ ಕಂಡು ಬರಲಿಲ್ಲ.

ಕೆಟ್ಟ ಕೆಟ್ಟ ಕನಸುಗಳು ಬೀಳಲಾರಂಭಿಸಿ
ಭಯವಾಗಿ ನಡುಕ ಗದಗುಡಿಸ ತೊಡಗಿತು.
ಪಾಪ ಪ್ರಜ್ಞೆಯ ಭೂತ ನೃತ್ಯವು ಸಾಗಿ
ಬಾರಿ ಬಾರಿಗೂ ತಪ್ಪಾಯಿತೆನಿಸಿತು
ಮನಸು ‘ತಬ್ಬಲಿ’ ‘ತಬ್ಬಲಿ’ ಯೆಂದು ಚೀರ ತೊಡಗಿತು.

ಅನ್ನ ವಿಷವಾಯಿತು
ಬದುಕು ನಿಸ್ಸಾರವಾಯಿತು
ಅಂಗಿದ್ದರೇನು? ಇಂಗಿದ್ದರೇನು?
ಹ್ಯಾಗಿದ್ದರೇನು?
ಕರೆವವರೆ? ಕಳುವವರೆ?
ನೋಡುವವರೆ? ನಲಿವವರೆ?
ನಮಗೆ ಯಾರಿದ್ದಾರೆ?
‘ಇದೊಂದು ಜೀವನಾನ?’ ಎನ್ನಿಸಿ
ಆಸೆಯೇ ಇಮರಿ ಹೋಯಿತು.

ಅನ್ನೋ ಹಾಗಿಲ್ಲ ಅನುಭವಿಸೋ ಹಾಗಿಲ್ಲ
ಬನ್ನ ಬವಣೆ ಅಂತಗೊಣಗುವಂತಿಲ್ಲ
ಚೆನ್ನಿಗ ನನ್ನವನಿಗೂ ಹೀಗೆ ಅನ್ನಿಸುತ್ತಿರಬೇಕು ಎಲ್ಲಾ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...