ಸಂಕಟ

ರಥ, ಹರಿದಂತೆ ಈ ಬಾಳು
ಸರಿಯಾಗಿದ್ದರೆ ಮಾತ್ರ ಚೆಂದ, ಆನಂದ
ಸರಿ ತಪ್ಪಿದರೆ ಕೆಡುವುದು ಎಲ್ಲಾ ಅಂದ

ಹೋಗುವವೆ ಒಳ್ಳೆ ಕಾಲ
ಬರುವವೆ ಕೆಟ್ಟ ಕಾಲ
ನಮ್ಮದೂ ಒಂದು ಕಾಲಾನಾ?

ಏನು ಹೇಳಲಿ ಅಂದಿನ ವೈಭವವಾ-
ಎಲ್ಲಾ ಕೈ ನೀಡಿದಂಗಿತ್ತು
ಎತ್ತ ನೋಡಿದರು ಊರು ಕಾಲು ಕಟ್ಟಿದಂಗೆ ನಮ್ಮ
ಜಮೀನು ಕಾಣಿಗಳೆ

ಎಂಟಾರಿನ ಬೇಸಾಯ
ಕೈಗೊಬ್ಬ ಕಾಲಿಗೊಬ್ಬ ಅಳು
ಕುಡಿಯವಷ್ಟು ಕರೇವು
ಜೊತೆಗೆ ಗೌಡಿಕೆ ಬೇಕೆ
ಇನ್ನು ಕೇಳಬೇಕೆ!
ನಾಲ್ಕು ಜನರಿಗೆ ಬೇಕಾಗಿಬದುಕಿದರು ಹಿರಿಯರು

ನಮಗೆ ಊರು ಮನೆ ಏಕಪಥವಾಗಿತ್ತು
ತೋಳಿಂದ ಇಳಿಯಲಿಲ್ಲ-
ಮನೆಯವರು ತಪ್ಪ ಊರವರು
ಊರವರು ತಪ್ಪ ಮನೆಯವರು
ಆಡಿಸಿ ಬೆಳೆಸಿದರು

ಅದೆಲ್ಲಾ ಈಗ ಮುಗಿದ ಅಧ್ಯಾಯ!
ಹಿರಿಯರು ಹೋದರು
ಜೊತೆಗೆ ಎಲ್ಲವೂ ಹೋಯಿತು
ಪಾಂಡವರ ಬೀಳಾಗಿ ಹೋಯಿತು.

ಏನಾಯಿತೋ ಏನು ಕತೆಯೋ
ಭಗ್ಗನೆ ಬರಿದಾಯತು
ಮನೆ ಉಳಿಯಲಿಲ್ಲ
ವಂಶ ಬೆಳೆಯಲಿಲ್ಲ

ಯಾವ ಬಾಯಲ್ಲಿ ಹೇಳಲಿ
ಅತ್ತಿಗೆ ಹೋದ ಮೇಲೆ ಅಣ್ಣ ಕೆಟ್ಟು ಬಿಟ್ಟ
ಎಲ್ಲಾ ಮರೆತು ಬಿಟ್ಟ
ಮಕ್ಕಳು ಬೀದಿಗೆ ಬಿದ್ದವು
ಅನ್ಯರ ಮನೆಯ ಜಗುಲಿಯಾಯಿತು.
ಅವುಗಳಾಯಿತು
ಯಾರಿದ್ದು ಏನು ಬಂತು?
ಶಿವಾ ಇಷ್ಟು ಕಠೋರನಾಗಬಾರದಿತ್ತು

ಯಾರನ್ನಂದು ಏನು ಬರುವುದು?
ನಾವು ಬೇಡಿ ಬಂದಿದ್ದೇ ಇಷ್ಟು!
ಹಿಂದೆ ನಾವ್ಯಾರ ತೌರ ತೊರೆಸಿದ್ದೇವೊ…
ಯಾವ ಪಾಪಕ್ಕಾಗಿ ಈ ಶಿಕ್ಷೆಯೋ
ಬಲ್ಲವರಾರು?

ಎಲ್ಲರೂ ತವರೂರಿಗೆ ಹೋಗಿ
ಒಂದೆರಡು ದಿನವಿದ್ದು
ಕೈಯಾರಿಸಿ ಕೊಂಡು ಬರುವರು
ನಾವೆಲ್ಲಿಗೆ ಹೋಗುವುದು?
ನೆನೆಯದ ದಿನವಿಲ್ಲ
ಕೊರಗದ ಕ್ಷಣವಿಲ್ಲ
ಮರವೆಯಾಗದಲ್ಲ?

ಯಾರಾದರೂ ಸಿಕ್ಕಿ ಸುದ್ದಿ ಹೇಳಿದರೆ
ಆದಿನವೆಲ್ಲ ತುತ್ತುಮಿದ್ದರೆ ಮಗಳಲ್ಲ
ಏನು ಮಾಡುವುದು ಹೇಳಿ
ಎದೆ ಕೊಟ್ಟ ನಿಲ್ಲೋಣವೆಂದರೆ
ಇಲ್ಲೂ ಬಗೆ ಮಿಗಿಯಿಲ್ಲ.

ಕಂಡರೆ ಕಣ್ಣುರಿ
ಕಾಣದಿದ್ದರೆ ಹೊಟ್ಟೆಯುರಿ
ಈ ರೀತಿ ಯಾಗಿದೇ ರೀ ನನ್ನ ಸ್ಥಿತಿ
ಅದಕ್ಕೆ,
ಕಾಣದಂಗೆ ಕಣ್ಮರೆಯಲ್ಲಿರುವುದೊಂದೇ ನನಗುಳಿದಿರುವ ದಾರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೆಳಗೆ ಬಿದ್ದೆಯಾ ಮಗನೆ
Next post ಸಂಭ್ರಮ

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys