Home / ಕವನ / ಕವಿತೆ / ಸಂಕಟ

ಸಂಕಟ

ರಥ, ಹರಿದಂತೆ ಈ ಬಾಳು
ಸರಿಯಾಗಿದ್ದರೆ ಮಾತ್ರ ಚೆಂದ, ಆನಂದ
ಸರಿ ತಪ್ಪಿದರೆ ಕೆಡುವುದು ಎಲ್ಲಾ ಅಂದ

ಹೋಗುವವೆ ಒಳ್ಳೆ ಕಾಲ
ಬರುವವೆ ಕೆಟ್ಟ ಕಾಲ
ನಮ್ಮದೂ ಒಂದು ಕಾಲಾನಾ?

ಏನು ಹೇಳಲಿ ಅಂದಿನ ವೈಭವವಾ-
ಎಲ್ಲಾ ಕೈ ನೀಡಿದಂಗಿತ್ತು
ಎತ್ತ ನೋಡಿದರು ಊರು ಕಾಲು ಕಟ್ಟಿದಂಗೆ ನಮ್ಮ
ಜಮೀನು ಕಾಣಿಗಳೆ

ಎಂಟಾರಿನ ಬೇಸಾಯ
ಕೈಗೊಬ್ಬ ಕಾಲಿಗೊಬ್ಬ ಅಳು
ಕುಡಿಯವಷ್ಟು ಕರೇವು
ಜೊತೆಗೆ ಗೌಡಿಕೆ ಬೇಕೆ
ಇನ್ನು ಕೇಳಬೇಕೆ!
ನಾಲ್ಕು ಜನರಿಗೆ ಬೇಕಾಗಿಬದುಕಿದರು ಹಿರಿಯರು

ನಮಗೆ ಊರು ಮನೆ ಏಕಪಥವಾಗಿತ್ತು
ತೋಳಿಂದ ಇಳಿಯಲಿಲ್ಲ-
ಮನೆಯವರು ತಪ್ಪ ಊರವರು
ಊರವರು ತಪ್ಪ ಮನೆಯವರು
ಆಡಿಸಿ ಬೆಳೆಸಿದರು

ಅದೆಲ್ಲಾ ಈಗ ಮುಗಿದ ಅಧ್ಯಾಯ!
ಹಿರಿಯರು ಹೋದರು
ಜೊತೆಗೆ ಎಲ್ಲವೂ ಹೋಯಿತು
ಪಾಂಡವರ ಬೀಳಾಗಿ ಹೋಯಿತು.

ಏನಾಯಿತೋ ಏನು ಕತೆಯೋ
ಭಗ್ಗನೆ ಬರಿದಾಯತು
ಮನೆ ಉಳಿಯಲಿಲ್ಲ
ವಂಶ ಬೆಳೆಯಲಿಲ್ಲ

ಯಾವ ಬಾಯಲ್ಲಿ ಹೇಳಲಿ
ಅತ್ತಿಗೆ ಹೋದ ಮೇಲೆ ಅಣ್ಣ ಕೆಟ್ಟು ಬಿಟ್ಟ
ಎಲ್ಲಾ ಮರೆತು ಬಿಟ್ಟ
ಮಕ್ಕಳು ಬೀದಿಗೆ ಬಿದ್ದವು
ಅನ್ಯರ ಮನೆಯ ಜಗುಲಿಯಾಯಿತು.
ಅವುಗಳಾಯಿತು
ಯಾರಿದ್ದು ಏನು ಬಂತು?
ಶಿವಾ ಇಷ್ಟು ಕಠೋರನಾಗಬಾರದಿತ್ತು

ಯಾರನ್ನಂದು ಏನು ಬರುವುದು?
ನಾವು ಬೇಡಿ ಬಂದಿದ್ದೇ ಇಷ್ಟು!
ಹಿಂದೆ ನಾವ್ಯಾರ ತೌರ ತೊರೆಸಿದ್ದೇವೊ…
ಯಾವ ಪಾಪಕ್ಕಾಗಿ ಈ ಶಿಕ್ಷೆಯೋ
ಬಲ್ಲವರಾರು?

ಎಲ್ಲರೂ ತವರೂರಿಗೆ ಹೋಗಿ
ಒಂದೆರಡು ದಿನವಿದ್ದು
ಕೈಯಾರಿಸಿ ಕೊಂಡು ಬರುವರು
ನಾವೆಲ್ಲಿಗೆ ಹೋಗುವುದು?
ನೆನೆಯದ ದಿನವಿಲ್ಲ
ಕೊರಗದ ಕ್ಷಣವಿಲ್ಲ
ಮರವೆಯಾಗದಲ್ಲ?

ಯಾರಾದರೂ ಸಿಕ್ಕಿ ಸುದ್ದಿ ಹೇಳಿದರೆ
ಆದಿನವೆಲ್ಲ ತುತ್ತುಮಿದ್ದರೆ ಮಗಳಲ್ಲ
ಏನು ಮಾಡುವುದು ಹೇಳಿ
ಎದೆ ಕೊಟ್ಟ ನಿಲ್ಲೋಣವೆಂದರೆ
ಇಲ್ಲೂ ಬಗೆ ಮಿಗಿಯಿಲ್ಲ.

ಕಂಡರೆ ಕಣ್ಣುರಿ
ಕಾಣದಿದ್ದರೆ ಹೊಟ್ಟೆಯುರಿ
ಈ ರೀತಿ ಯಾಗಿದೇ ರೀ ನನ್ನ ಸ್ಥಿತಿ
ಅದಕ್ಕೆ,
ಕಾಣದಂಗೆ ಕಣ್ಮರೆಯಲ್ಲಿರುವುದೊಂದೇ ನನಗುಳಿದಿರುವ ದಾರಿ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...