Home / ಕವನ / ಕವಿತೆ / ಸಂಕಟ

ಸಂಕಟ

ರಥ, ಹರಿದಂತೆ ಈ ಬಾಳು
ಸರಿಯಾಗಿದ್ದರೆ ಮಾತ್ರ ಚೆಂದ, ಆನಂದ
ಸರಿ ತಪ್ಪಿದರೆ ಕೆಡುವುದು ಎಲ್ಲಾ ಅಂದ

ಹೋಗುವವೆ ಒಳ್ಳೆ ಕಾಲ
ಬರುವವೆ ಕೆಟ್ಟ ಕಾಲ
ನಮ್ಮದೂ ಒಂದು ಕಾಲಾನಾ?

ಏನು ಹೇಳಲಿ ಅಂದಿನ ವೈಭವವಾ-
ಎಲ್ಲಾ ಕೈ ನೀಡಿದಂಗಿತ್ತು
ಎತ್ತ ನೋಡಿದರು ಊರು ಕಾಲು ಕಟ್ಟಿದಂಗೆ ನಮ್ಮ
ಜಮೀನು ಕಾಣಿಗಳೆ

ಎಂಟಾರಿನ ಬೇಸಾಯ
ಕೈಗೊಬ್ಬ ಕಾಲಿಗೊಬ್ಬ ಅಳು
ಕುಡಿಯವಷ್ಟು ಕರೇವು
ಜೊತೆಗೆ ಗೌಡಿಕೆ ಬೇಕೆ
ಇನ್ನು ಕೇಳಬೇಕೆ!
ನಾಲ್ಕು ಜನರಿಗೆ ಬೇಕಾಗಿಬದುಕಿದರು ಹಿರಿಯರು

ನಮಗೆ ಊರು ಮನೆ ಏಕಪಥವಾಗಿತ್ತು
ತೋಳಿಂದ ಇಳಿಯಲಿಲ್ಲ-
ಮನೆಯವರು ತಪ್ಪ ಊರವರು
ಊರವರು ತಪ್ಪ ಮನೆಯವರು
ಆಡಿಸಿ ಬೆಳೆಸಿದರು

ಅದೆಲ್ಲಾ ಈಗ ಮುಗಿದ ಅಧ್ಯಾಯ!
ಹಿರಿಯರು ಹೋದರು
ಜೊತೆಗೆ ಎಲ್ಲವೂ ಹೋಯಿತು
ಪಾಂಡವರ ಬೀಳಾಗಿ ಹೋಯಿತು.

ಏನಾಯಿತೋ ಏನು ಕತೆಯೋ
ಭಗ್ಗನೆ ಬರಿದಾಯತು
ಮನೆ ಉಳಿಯಲಿಲ್ಲ
ವಂಶ ಬೆಳೆಯಲಿಲ್ಲ

ಯಾವ ಬಾಯಲ್ಲಿ ಹೇಳಲಿ
ಅತ್ತಿಗೆ ಹೋದ ಮೇಲೆ ಅಣ್ಣ ಕೆಟ್ಟು ಬಿಟ್ಟ
ಎಲ್ಲಾ ಮರೆತು ಬಿಟ್ಟ
ಮಕ್ಕಳು ಬೀದಿಗೆ ಬಿದ್ದವು
ಅನ್ಯರ ಮನೆಯ ಜಗುಲಿಯಾಯಿತು.
ಅವುಗಳಾಯಿತು
ಯಾರಿದ್ದು ಏನು ಬಂತು?
ಶಿವಾ ಇಷ್ಟು ಕಠೋರನಾಗಬಾರದಿತ್ತು

ಯಾರನ್ನಂದು ಏನು ಬರುವುದು?
ನಾವು ಬೇಡಿ ಬಂದಿದ್ದೇ ಇಷ್ಟು!
ಹಿಂದೆ ನಾವ್ಯಾರ ತೌರ ತೊರೆಸಿದ್ದೇವೊ…
ಯಾವ ಪಾಪಕ್ಕಾಗಿ ಈ ಶಿಕ್ಷೆಯೋ
ಬಲ್ಲವರಾರು?

ಎಲ್ಲರೂ ತವರೂರಿಗೆ ಹೋಗಿ
ಒಂದೆರಡು ದಿನವಿದ್ದು
ಕೈಯಾರಿಸಿ ಕೊಂಡು ಬರುವರು
ನಾವೆಲ್ಲಿಗೆ ಹೋಗುವುದು?
ನೆನೆಯದ ದಿನವಿಲ್ಲ
ಕೊರಗದ ಕ್ಷಣವಿಲ್ಲ
ಮರವೆಯಾಗದಲ್ಲ?

ಯಾರಾದರೂ ಸಿಕ್ಕಿ ಸುದ್ದಿ ಹೇಳಿದರೆ
ಆದಿನವೆಲ್ಲ ತುತ್ತುಮಿದ್ದರೆ ಮಗಳಲ್ಲ
ಏನು ಮಾಡುವುದು ಹೇಳಿ
ಎದೆ ಕೊಟ್ಟ ನಿಲ್ಲೋಣವೆಂದರೆ
ಇಲ್ಲೂ ಬಗೆ ಮಿಗಿಯಿಲ್ಲ.

ಕಂಡರೆ ಕಣ್ಣುರಿ
ಕಾಣದಿದ್ದರೆ ಹೊಟ್ಟೆಯುರಿ
ಈ ರೀತಿ ಯಾಗಿದೇ ರೀ ನನ್ನ ಸ್ಥಿತಿ
ಅದಕ್ಕೆ,
ಕಾಣದಂಗೆ ಕಣ್ಮರೆಯಲ್ಲಿರುವುದೊಂದೇ ನನಗುಳಿದಿರುವ ದಾರಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...