Home / ಕವನ / ಕವಿತೆ / ಹಬ್ಬ

ಹಬ್ಬ

ಹುಟ್ಟೂರು
ಹೆತ್ತವರು, ಒಡಹುಟ್ಟಿದವರು, ನೆಂಟರಿಷ್ಟರ ಬಗ್ಗೆ ಮಾತಾಡುವಾಗ
ಹೊಟ್ಟೆ ತುಂಬಿದಂತಾಗುತ್ತೆ
ಹಿಟ್ಟು ಕಾರವನ್ನೇ ತಿಂದರೂ
ಒಂದ್ಸಾರಿ ನೋಡಿಕೊಂಡು ಬರಬೇಕೆನಿಸುತ್ತೆ
ಯಾವ ಕಾಲನೂ ಹೇಳಬೇಡ ಮಹಾನವಮಿ ಕಾಲವೊಂದು
ಬಿಟ್ಟ ಮೇಲೆ

ದಿಣ್ಣೆ, ದೀಪಾಂತರ ತುಂಬಾ
ಆಸೆಯೆ ಆಕಾರ ತಳೆದಂತೆ ಬೆಳೆದ
ಹೂಪೀಸು, ವಡೆತಲೆಯ ಫಲ ಪೈರು
ಗಾಳಿಗೆ ತೊನೆದಾಡುತ್ತಿರುವಾಗ
ಬಯಲಾದ ಬಯಲೆಲ್ಲಾ ಸಂಗೀತ ನೃತ್ಯದಲ್ಲಿ ತೇಲುವುದು,

ದೊಡ್ಡವಳು ತಾಯಿ ಗಂಗಮ್ಮ ಕೃಪೆಮಾಡಿ ಬಂದು
ನೆರೆ ತೊರೆ ಹಳ್ಳ ಕೊಳ್ಳಗಳಲ್ಲಿ ಅತ್ತಿತ್ತ ಆಡ್ಡಾಡುವ
ಕೆರೆ ಕಟ್ಟೆಗಳಲ್ಲಿ ವಿಶ್ರಾಂತಿ ಪಡೆಯುವ
ಬೆಟ್ಟ ಗುಡ್ಡಗಳ ನೆತ್ತಿಯನ್ನು ಜಾರುಬಂಡಿ ಮಾಡಿಕೊಂಡು
ಆಟವಾಡುವ ದೃಶ್ಯ
ಕಣ್ಣಿಗೆ ಬೀಳಲು ಪುಣ್ಯ ಮಾಡಿರಬೇಕು.
ಸರ್ತಿ ಸರ್ತಿಗೆ ಬರುವ ಈ ಹಿರಿಯರ ಹಬ್ಬಕ್ಕೆ ಕರೆಯದಿದ್ದರೂ
ನಿಲ್ಲಲಾರೆ

ಗಂಡ ಮಕ್ಕಳ ಕೂಡಿಕೊಂಡು
ಪುಟ್ಟ ಮೆರವಣಿಗೆಯಲ್ಲಿ ಸಾಗಿ ಬರುವೆ
ಜೀವನಾ ದ್ರವ್ಯವನು ಕೂಡಿಸಿ ಕೊಳ್ಳುವೆನು
ದೂರದಲ್ಲಿರುವಾಗಲೇ ಕೂನು ಹಿಡಿದ ಚಿಕ್ಕವರು
ಓಡೋಡಿ ಬಂದು
ಅತ್ತೆ, ಮಾವ ಬಂದರೆಂದು ಡಂಗುರ ಸಾರುವುದು
ಹಿರಿಯರು, ಎಲ್ಲರೂ ಬಾಗಿಲಿಗೆ ಬಂದು
ಉಲ್ಲಾಸದ ನಗೆಯಲ್ಲಿ ಸ್ವಾಗತದ ಸೆಳೇವು ನೀಡುವುದು
ಜೀವನದಿ ಮರೆಯಲಾಗದ ಸುಖಾನುಭವವ ತರುವುದು.

ಊಟ ಉಪಚಾರ ಮುಗಿದು
ಎರಡೂ ಕಡೆಯ ಮಕ್ಕಳ ಪ್ರತಿಭಾ ಪಾಠಗಳ ವರದಿಯ ಜೊತೆಜೊತೆಗೆ
ಪರಸ್ಪರ ಸುಖ ಸಂಕಥಾ, ಆಮೋದ ಪ್ರಮೋದದ ನೆರಿಕೆಯಲ್ಲಿ
ಇಣುಕುವಾಗ

ಮಾತಿಗೆ ನೂರು ಮುಖವಾಗಿ
ಸರಿಹೊತ್ತಾದರೂ ಕೊಡುಹ ಮುಗಿಯುವುದಿಲ್ಲ
ಒಬ್ಬೊಬ್ಬರೆ ನೆಂಟರು ಬಂದು ಸೇರಿದ ಹಾಗೆ ಉದ್ದುದ್ದ ಬೆಳೆವುದು
ಹಬ್ಬವೇ ಮುಗಿದು ಊರಿಗೆ ಹೊರಟು ಅರ್ಧ ದಾರಿಗೆ ಬಂದರೂ
ಮುಗಿಯುವ ಲಕ್ಷಣ ಕಣುವುದಿಲ್ಲ.

ಬಿಡುವಾಗಿ ಊರು, ಹೊಲಗಳ ಸುತ್ತ
ಒಂದು ಸುತ್ತು ಹಾಕಿ ಬರುವಾಗ
ಬಾಲ್ಯವು ಮರುಕಳಿಸುವುದು
ಎಲ್ಲಾ ಮುಗಿದು ಹೊರಟು ನಿಂತಾಗ
ಕ್ಷಣ ಕಾಲ
ಎಂದಿನಂತೆ ಕಣ್ಣು ಮಂಜಾಗುವವು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...