Home / ಕವನ / ಕವಿತೆ / ಹಬ್ಬ

ಹಬ್ಬ

ಹುಟ್ಟೂರು
ಹೆತ್ತವರು, ಒಡಹುಟ್ಟಿದವರು, ನೆಂಟರಿಷ್ಟರ ಬಗ್ಗೆ ಮಾತಾಡುವಾಗ
ಹೊಟ್ಟೆ ತುಂಬಿದಂತಾಗುತ್ತೆ
ಹಿಟ್ಟು ಕಾರವನ್ನೇ ತಿಂದರೂ
ಒಂದ್ಸಾರಿ ನೋಡಿಕೊಂಡು ಬರಬೇಕೆನಿಸುತ್ತೆ
ಯಾವ ಕಾಲನೂ ಹೇಳಬೇಡ ಮಹಾನವಮಿ ಕಾಲವೊಂದು
ಬಿಟ್ಟ ಮೇಲೆ

ದಿಣ್ಣೆ, ದೀಪಾಂತರ ತುಂಬಾ
ಆಸೆಯೆ ಆಕಾರ ತಳೆದಂತೆ ಬೆಳೆದ
ಹೂಪೀಸು, ವಡೆತಲೆಯ ಫಲ ಪೈರು
ಗಾಳಿಗೆ ತೊನೆದಾಡುತ್ತಿರುವಾಗ
ಬಯಲಾದ ಬಯಲೆಲ್ಲಾ ಸಂಗೀತ ನೃತ್ಯದಲ್ಲಿ ತೇಲುವುದು,

ದೊಡ್ಡವಳು ತಾಯಿ ಗಂಗಮ್ಮ ಕೃಪೆಮಾಡಿ ಬಂದು
ನೆರೆ ತೊರೆ ಹಳ್ಳ ಕೊಳ್ಳಗಳಲ್ಲಿ ಅತ್ತಿತ್ತ ಆಡ್ಡಾಡುವ
ಕೆರೆ ಕಟ್ಟೆಗಳಲ್ಲಿ ವಿಶ್ರಾಂತಿ ಪಡೆಯುವ
ಬೆಟ್ಟ ಗುಡ್ಡಗಳ ನೆತ್ತಿಯನ್ನು ಜಾರುಬಂಡಿ ಮಾಡಿಕೊಂಡು
ಆಟವಾಡುವ ದೃಶ್ಯ
ಕಣ್ಣಿಗೆ ಬೀಳಲು ಪುಣ್ಯ ಮಾಡಿರಬೇಕು.
ಸರ್ತಿ ಸರ್ತಿಗೆ ಬರುವ ಈ ಹಿರಿಯರ ಹಬ್ಬಕ್ಕೆ ಕರೆಯದಿದ್ದರೂ
ನಿಲ್ಲಲಾರೆ

ಗಂಡ ಮಕ್ಕಳ ಕೂಡಿಕೊಂಡು
ಪುಟ್ಟ ಮೆರವಣಿಗೆಯಲ್ಲಿ ಸಾಗಿ ಬರುವೆ
ಜೀವನಾ ದ್ರವ್ಯವನು ಕೂಡಿಸಿ ಕೊಳ್ಳುವೆನು
ದೂರದಲ್ಲಿರುವಾಗಲೇ ಕೂನು ಹಿಡಿದ ಚಿಕ್ಕವರು
ಓಡೋಡಿ ಬಂದು
ಅತ್ತೆ, ಮಾವ ಬಂದರೆಂದು ಡಂಗುರ ಸಾರುವುದು
ಹಿರಿಯರು, ಎಲ್ಲರೂ ಬಾಗಿಲಿಗೆ ಬಂದು
ಉಲ್ಲಾಸದ ನಗೆಯಲ್ಲಿ ಸ್ವಾಗತದ ಸೆಳೇವು ನೀಡುವುದು
ಜೀವನದಿ ಮರೆಯಲಾಗದ ಸುಖಾನುಭವವ ತರುವುದು.

ಊಟ ಉಪಚಾರ ಮುಗಿದು
ಎರಡೂ ಕಡೆಯ ಮಕ್ಕಳ ಪ್ರತಿಭಾ ಪಾಠಗಳ ವರದಿಯ ಜೊತೆಜೊತೆಗೆ
ಪರಸ್ಪರ ಸುಖ ಸಂಕಥಾ, ಆಮೋದ ಪ್ರಮೋದದ ನೆರಿಕೆಯಲ್ಲಿ
ಇಣುಕುವಾಗ

ಮಾತಿಗೆ ನೂರು ಮುಖವಾಗಿ
ಸರಿಹೊತ್ತಾದರೂ ಕೊಡುಹ ಮುಗಿಯುವುದಿಲ್ಲ
ಒಬ್ಬೊಬ್ಬರೆ ನೆಂಟರು ಬಂದು ಸೇರಿದ ಹಾಗೆ ಉದ್ದುದ್ದ ಬೆಳೆವುದು
ಹಬ್ಬವೇ ಮುಗಿದು ಊರಿಗೆ ಹೊರಟು ಅರ್ಧ ದಾರಿಗೆ ಬಂದರೂ
ಮುಗಿಯುವ ಲಕ್ಷಣ ಕಣುವುದಿಲ್ಲ.

ಬಿಡುವಾಗಿ ಊರು, ಹೊಲಗಳ ಸುತ್ತ
ಒಂದು ಸುತ್ತು ಹಾಕಿ ಬರುವಾಗ
ಬಾಲ್ಯವು ಮರುಕಳಿಸುವುದು
ಎಲ್ಲಾ ಮುಗಿದು ಹೊರಟು ನಿಂತಾಗ
ಕ್ಷಣ ಕಾಲ
ಎಂದಿನಂತೆ ಕಣ್ಣು ಮಂಜಾಗುವವು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...