Home / ಕವನ / ಕವಿತೆ / ಪರಿವರ್‍ತನೆ

ಪರಿವರ್‍ತನೆ

ಯಾಕೋ ಈಗೀಗ ಊರಿಗೆ ಹೋಗಂಗಾಗುವುದಿಲ್ಲ
ಯಾವುದೊಂದು ಆಗಿದ್ದ೦ಗೀಗಿಲ್ಲ
ಎಲ್ಲಾ ಬದಲಾಗಿ ಬಿಟ್ಟಿದೆ,
ಯಾರಿದ್ದಾರೆ ಆಗಿನವರು?
ಎಲ್ಲಾ ಹೊಸಬರೇ ತುಂಬಿಹರು ಊರು ತುಂಬಾ
ಆಗಿದ್ದಂಗೆ ಯಾರಿದ್ದಾರೆ ಈಗ ?

ನಗ ನಗ್ತಾ ಕರೆದು ಮಾತಾಡೋರಿಲ್ಲ
ಹರ್ಷೋಲ್ಲಾಸ ತೋರುವರಿಲ್ಲ
ಮನೆಯಲ್ಲೂ ಕೂಡಾ ಅಷ್ಟೆ ಆಗಿದೆ
ಅಪ್ಪ, ಅಮ್ಮನಿಗೆ ವಯಸ್ಸಾಗಿ, ಶಕ್ತಿ, ಧ್ವನಿ ಉಡುಗಿಹೋಗಿ
ಚಲಾವಣೆಯ ಕಳೆದು ಕೊಂಡಿಹರು
ಮಾಡಿದ್ದು ಉಣ್ಣಬೇಕು, ಬಾಯ್ಮುಚ್ಚಿಕೊಂಡಿರಬೇಕು

ನಾನೇನಾದರೂ ಊರಿಗೆ ಹೋದರೆ
ಒಂದೇ ಸಮನೆ ಹೊಟ್ಟೆ ಸುಟ್ಟುಕೊಳ್ಳುವರು
ಇಲ್ಲೊಂದು ನನ್ಮನೆ ಇದೆಯೆಂದು ಆಮಗಾ
ಊರಿಂದ ಬಂದರೆ
ಇವರು ನೋಡಲ್ಲ ಮಾಡಲ್ಲ’ ಎಂದು
ಹೀಗಿರುವಾಗ ಮೇಲಿಂದ ಮೇಲೆ ನಾನ್ಯಾಕೆ ಹೋಗಿ
ಅವರ ಗಾಯದ ಮೇಲೆ ಬರೆ ಎಳೆದು ಬರಬೇಕು.

ನನಗೆ ಅವರ ಒಂದು ಕೊರಗಾಗಿ ಬಿಟ್ಟಿದೆ
ಹೋದರೆ ಒಂದು.. ಹೋಗದಿದ್ದರೆ ಇನ್ನೊಂದು
ಹೋಗಿ ಬಂದು ಮಾಡದೆ ಇದ್ದರೆ
ಎಲ್ಲರೂ ದೂರಾಗಿ ಬಿಟ್ಟರುಯೆಂದು ನೊಂದು ಕೊಳ್ಳುವರು.
ಈಗ ಅಣ್ಣ ಅತ್ತಿಗೆದೇ ಎಲ್ಲಾ ಕಾರುಬಾರು
ಅವರೆಲ್ಲಾ ಗಮನ ತಮ್ಮ ತಮ್ಮ ಮಕ್ಕಳ ಕಡೆಗೆ
ಹೊಸದಾಗಿ ಬೆಳೆದಂತ ಸಂಬಂಧದ ಕಡೆಗೆ
ಅಣ್ಣ ತಮ್ಮಂದಿರು ಒಂದಾಗಿ ಇದ್ದವರು ಬೇರೆ ಆಗಿದ್ದಾರೆ
ಒಬ್ಬರ ಮುಖ ಒಬ್ಬರಿಗಿಲ್ಲ
ಒಬ್ಬರನ್ನು ಕಂಡರೆ ಇನ್ನೊಬ್ಬರಿಗಾಗಲ್ಲ
ಸಣ್ಣದ್ದು, ಪುಟ್ಟದ್ದಕ್ಕೆ… ಕಡಿದಾಟ, ಬಡಿದಾಟ
ರಕ್ತ ಸಂಬಂಧದ ಅರ್ಥವನ್ನೇ ಕೆಡಿಸಿಹರು.

ನೆಟ್ಟ ನೇರನೆ ಒಂದೇ ಒಂದು ಮಾತಿಲ್ಲ
ಬಾಯಿ ಬಿಟ್ಟರೆ ಸಾಕು ಬರಿಕೊಂಕು ಡೊಂಕು
ತಮ್ಮ ತಮ್ಮದೆ ಅವರಿಗೆ ದೊಡ್ಡದಾಗಿ ಬಿಟ್ಟಿಹದು
ಹೋದರೂ ಕೂಡ ಮುಖ ಕೊಟ್ಟು ಸರಿಯಾಗಿ ಮಾತಾಡುವುದಿಲ್ಲ
ಒಳ್ಳೆದೊಂದು ಮಾತಿಲ್ಲ ಕತೆಯಿಲ್ಲ
ಬಂದವಳೆ ಅಂದರೆ ಯಾಕಂತೆ? ಅನ್ನದಾಗ
ಹೋಗೋದರಲ್ಲೇನಾದರೂ ಆರ್ಥ ವಿದೆಯಾ!
*****

Tagged:

Leave a Reply

Your email address will not be published. Required fields are marked *

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...

ಶೋಭಾ, ನಿನ್ನ ಎಲ್ಲಾ ಕಾಗದಗಳೂ ತಲುಪಿವೆ. ಓದುತ್ತಲೂ ಇದ್ದೇನೆ. ‘ತಂಪೆರೆಯುವ ನಿನ್ನ ಕಾಗದಗಳನ್ನು ದಿನಾ ಎದುರು ನೋಡುತ್ತಿರುತ್ತೇನೆ. ಅಬ್ಬಾ! ಎಷ್ಟು ಪ್ರಶ್ನೆಗಳನ್ನು ಕೇಳಿದ್ದೀಯಾ? ಬರೆಯುವ ಶಕ್ತಿ ಬರಲೀಂತ ಕಾಯ್ತಾ ಇದ್ದೆ. ಮಾನಸಿಕ ವಿಪ್ಲವದಲ್ಲಿ ಮನಸ್ಸು, ದೇಹ ಎಲ್ಲವೂ ಕೊರಡಿನಂತಾ...