Home / ಕವನ / ಕವಿತೆ / ಪರಿವರ್‍ತನೆ

ಪರಿವರ್‍ತನೆ

ಯಾಕೋ ಈಗೀಗ ಊರಿಗೆ ಹೋಗಂಗಾಗುವುದಿಲ್ಲ
ಯಾವುದೊಂದು ಆಗಿದ್ದ೦ಗೀಗಿಲ್ಲ
ಎಲ್ಲಾ ಬದಲಾಗಿ ಬಿಟ್ಟಿದೆ,
ಯಾರಿದ್ದಾರೆ ಆಗಿನವರು?
ಎಲ್ಲಾ ಹೊಸಬರೇ ತುಂಬಿಹರು ಊರು ತುಂಬಾ
ಆಗಿದ್ದಂಗೆ ಯಾರಿದ್ದಾರೆ ಈಗ ?

ನಗ ನಗ್ತಾ ಕರೆದು ಮಾತಾಡೋರಿಲ್ಲ
ಹರ್ಷೋಲ್ಲಾಸ ತೋರುವರಿಲ್ಲ
ಮನೆಯಲ್ಲೂ ಕೂಡಾ ಅಷ್ಟೆ ಆಗಿದೆ
ಅಪ್ಪ, ಅಮ್ಮನಿಗೆ ವಯಸ್ಸಾಗಿ, ಶಕ್ತಿ, ಧ್ವನಿ ಉಡುಗಿಹೋಗಿ
ಚಲಾವಣೆಯ ಕಳೆದು ಕೊಂಡಿಹರು
ಮಾಡಿದ್ದು ಉಣ್ಣಬೇಕು, ಬಾಯ್ಮುಚ್ಚಿಕೊಂಡಿರಬೇಕು

ನಾನೇನಾದರೂ ಊರಿಗೆ ಹೋದರೆ
ಒಂದೇ ಸಮನೆ ಹೊಟ್ಟೆ ಸುಟ್ಟುಕೊಳ್ಳುವರು
ಇಲ್ಲೊಂದು ನನ್ಮನೆ ಇದೆಯೆಂದು ಆಮಗಾ
ಊರಿಂದ ಬಂದರೆ
ಇವರು ನೋಡಲ್ಲ ಮಾಡಲ್ಲ’ ಎಂದು
ಹೀಗಿರುವಾಗ ಮೇಲಿಂದ ಮೇಲೆ ನಾನ್ಯಾಕೆ ಹೋಗಿ
ಅವರ ಗಾಯದ ಮೇಲೆ ಬರೆ ಎಳೆದು ಬರಬೇಕು.

ನನಗೆ ಅವರ ಒಂದು ಕೊರಗಾಗಿ ಬಿಟ್ಟಿದೆ
ಹೋದರೆ ಒಂದು.. ಹೋಗದಿದ್ದರೆ ಇನ್ನೊಂದು
ಹೋಗಿ ಬಂದು ಮಾಡದೆ ಇದ್ದರೆ
ಎಲ್ಲರೂ ದೂರಾಗಿ ಬಿಟ್ಟರುಯೆಂದು ನೊಂದು ಕೊಳ್ಳುವರು.
ಈಗ ಅಣ್ಣ ಅತ್ತಿಗೆದೇ ಎಲ್ಲಾ ಕಾರುಬಾರು
ಅವರೆಲ್ಲಾ ಗಮನ ತಮ್ಮ ತಮ್ಮ ಮಕ್ಕಳ ಕಡೆಗೆ
ಹೊಸದಾಗಿ ಬೆಳೆದಂತ ಸಂಬಂಧದ ಕಡೆಗೆ
ಅಣ್ಣ ತಮ್ಮಂದಿರು ಒಂದಾಗಿ ಇದ್ದವರು ಬೇರೆ ಆಗಿದ್ದಾರೆ
ಒಬ್ಬರ ಮುಖ ಒಬ್ಬರಿಗಿಲ್ಲ
ಒಬ್ಬರನ್ನು ಕಂಡರೆ ಇನ್ನೊಬ್ಬರಿಗಾಗಲ್ಲ
ಸಣ್ಣದ್ದು, ಪುಟ್ಟದ್ದಕ್ಕೆ… ಕಡಿದಾಟ, ಬಡಿದಾಟ
ರಕ್ತ ಸಂಬಂಧದ ಅರ್ಥವನ್ನೇ ಕೆಡಿಸಿಹರು.

ನೆಟ್ಟ ನೇರನೆ ಒಂದೇ ಒಂದು ಮಾತಿಲ್ಲ
ಬಾಯಿ ಬಿಟ್ಟರೆ ಸಾಕು ಬರಿಕೊಂಕು ಡೊಂಕು
ತಮ್ಮ ತಮ್ಮದೆ ಅವರಿಗೆ ದೊಡ್ಡದಾಗಿ ಬಿಟ್ಟಿಹದು
ಹೋದರೂ ಕೂಡ ಮುಖ ಕೊಟ್ಟು ಸರಿಯಾಗಿ ಮಾತಾಡುವುದಿಲ್ಲ
ಒಳ್ಳೆದೊಂದು ಮಾತಿಲ್ಲ ಕತೆಯಿಲ್ಲ
ಬಂದವಳೆ ಅಂದರೆ ಯಾಕಂತೆ? ಅನ್ನದಾಗ
ಹೋಗೋದರಲ್ಲೇನಾದರೂ ಆರ್ಥ ವಿದೆಯಾ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...