Home / ಕವನ / ಕವಿತೆ / ನಮ್ಮನ್ನು ದೂರುವುದು ಯಾವ ನ್ಯಾಯ

ನಮ್ಮನ್ನು ದೂರುವುದು ಯಾವ ನ್ಯಾಯ

ಹೊಂದಿಕೊಂಡು ಹೋಗದ ಹೆಣ್ಣು
ಮನೆಯ ಒಡೆಯುವಳೆನ್ನುವರು
ಎಲ್ಲಾ ನಿಂದನೆಯ ನಮ್ಮ ತಲೆಗೆ ಕಟ್ಟುವರು
ವಿಚಾರ ಮಾಡುವವರು ಯಾರೂ ಇಲ್ಲ.

ಎಳೆಯ ಹುಡುಗಿಯ ತಂದು
ಮನೆದುಂಬಿಸಿ ಕೊಂಡಾಗ
ಹ್ಯಾಗೆ ನಡೆಸಿ ಕೊಳ್ಳಬೇಕಂತಾ
ತಿಳಿದಿಹರಾ?

ಅಪ್ಪ, ಅಮ್ಮನ ಮನೆಯಲ್ಲಿ
ಬದುಕನ್ನು ಎಷ್ಟೇ ಹತ್ತಿರದಿಂದ ನೋಡಿದರೂ ಸಹ
ಮುಖ್ಯ! ಮುಖಾಮುಖಿ ಇಲ್ಲಿ ತಾನೆ ?

ಅಲ್ಲಿ, ಆಡುತ್ತ ಕಲಿತಿದ್ದನ್ನು
ಇಲ್ಲಿ ಗಂಡನ ಮನೆಯಲ್ಲಿ
ಪ್ರಯೋಗಿಸಬೇಕಾಗಿ ಬಂದಾಗ
ತಪ್ಪುಗಳಾಗುವುದು ಸಹಜ ತಾನೆ ?

ಆಗೆಲ್ಲಾ! ತಿದ್ದಿ ತಿಳಿಸಿ ಹೇಳುವರಾರು ?
ಹಿರಿತನದ ಹೆಸರಲ್ಲಿ
ಬಯ್ದು ಬಡಿದು ಕಂಗೆಡಿಸುವರೆ ಬಹಳ ತಾನೆ ?
ಆಗ ಮನಸಿಗೆ ಏನನ್ನಿಸುತ್ತೆ
ನೀವೆ ಹೇಳಿ.

ಪ್ರಾಯವು ತುಂಬಾ ರಮ್ಯವಾದದ್ದು
ತಲೆತುಂಬಾ ನೂರಾರು ಸಿಹಿ ಸಿಹಿ ಕಲ್ಪನೆ, ಕನಸುಗಳು
ಪುಕ್ಕ ಬಿಚ್ಚಿದ ನವಿಲಿನಂತೆ ಒಂದೇ ಸಮನೆ ಕುಣಿಯುತ್ತಿರುತ್ತವೆ
ಯಾವುದು ಮಾಡೋಣ, ಹೇಗೆ ತಣಿಯೋಣ ಅನ್ನಿಸುತ್ತಿರುತ್ತದೆ.
ಇಂತದಕ್ಕೆಲ್ಲಾ ಒಟ್ಟು ಕುಟಂಬದಲ್ಲಿ ಆಸ್ಪದವಿರುತ್ತದೆಯೆ?

ಸರಸ ಸಲ್ಲಾಪ ವಿಹಾರ ವಿನೋದಗಳು ಗೌರವವಲ್ಲ ಎನ್ನುವಾಗ
ಮೂರ ಹೊತ್ತು ಮೂಗು ಹಿಡಿದುಕೊಂಡು ದುಡಿಯುತ್ತಿರಬೇಕೆಂದಾಗ
ಕೆಲವೊಮ್ಮೆ ಏಕಾಂತದ ಸಾಧನೆಯ ದುಸ್ತರವಾಗುವಾಗ
ದಿನ ದಿನಕ್ಕೆ ಕಿಚ್ಚು ಪುಟವಾಗುತ್ತ ಹೋಗುವುದೇ ಹೊರತು
ತಣಿಯುವುದಿಲ್ಲ;
ಅಂದಾಗ ಏನು ಮಾಡಬೇಕು ?

ಕೂಡಿ ಇದ್ದಾಗ ವ್ಯಕ್ತಿ ಗೌಣವಾಗುವನು
ಒಟ್ಟಾರೆಯ ವಿಚಾರಗಳು ತೂಕವಾಗುವವು
ಹೋಲಿಕೆ, ವ್ಯತ್ಯಾಸ ಹುಟ್ಟಿ ಮನಸು ರಾಡಿಯಾಗುವುದು
ತಾರುಣ್ಯದ ವಿಶಿಷ್ಟ ಬೆಳವಣಿಗೆಯಲ್ಲಿ
ತಂದೆ ತಾಯಿ ಅಣ್ಣ ತಮ್ಮಂದಿರೆಂಬ ಅನುಬಂಧದ ಕಾವು ತಗ್ಗುವುದು
ಆಗ…..
ಇದರ ಹಿಂದೆ ಇಷ್ಟು ಇನ್ನೆಷ್ಟೋ ಇರುವಾಗ
ನಮ್ಮನ್ನು ದೂರುವುದು ಯಾವ ನ್ಯಾಯ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...