Home / ಕವನ / ಕವಿತೆ / ಅಮಾನುಷ

ಅಮಾನುಷ

ದೇವರು, ಧರ್ಮವೆಂದರೆ ಸಾಕು
ಶಾಕಿನಿ, ಢಾಕಿನಿ ಪಿಶಾಚಿಗಳಾಗುವರು
ಮನುಷ್ಯರನ್ನು ಹೆಣ್ಣು, ಗಂಡನ್ನದೆ, ಶಿಶುಗಳನ್ನೂ ಬಿಡದೆ
ಜೀವದಲ್ಲಿದ್ದಂತೆಯೇ
ಹಸಿ ಹಸಿ ಮಾಂಸ, ಖಂಡಗಳನ್ನು ಹರಿಹರಿದು ಜಗಿಯುತ್ತ
ಬಿಸಿ, ಬಿಸಿ ರಕ್ತವನ್ನು ಗಟ ಗಟ ಕುಡಿಯುತ್ತ
ಮೂಳೆಗಳನ್ನು ಕಟ ಕಟ ಕಡಿಯುತ್ತ
ಭಯಂಕರ ಉನ್ಮಾದದ ನಗೆ ನಗುತ್ತ
ಹೃದಯ ವಿಜ್ರಾವಕವಾಗಿ ಕಿರಿಚುತ್ತ
ಪ್ರಳಯದ ಕುಣಿತದಲ್ಲಿ ತೊಡಗುವರು.

ನಾನಾ ಕಾರಣಗಳಿಗಾಗಿ
ಇವರ ಸುಲಭ ತುತ್ತಾಗುವರು
ಪ್ರೀತಿ ಪಾತ್ರರಾಗುವವರೆಂದರೆ ಹೆಂಗಸರು, ಮಕ್ಕಳು.

ಮಕ್ಕಳ ಒಂದೊಂದೇ ಎಳೆಯ ಭಾಗವನ್ನು
ಕತ್ತರಿಸಿ, ಕತ್ತರಿಸಿ,
ವಿಕೃತ ಭಕ್ತಿಯಲ್ಲಿ,
ಬಹು ಅಕ್ಕರೆಯಿಂದ,
ನಿಧಾನವಾಗಿ, ವಿಧಿಪೂರ್ವಕವಾಗಿ ನೈವೇದ್ಯ ಮಾಡುವರು
ಪ್ರಸಾದವೆಂದು ಕಣ್ಣಿಗೊತ್ತಿಕೊಂಡು
ಚಿಗುರೆಲೆಯಂತೆ ಮೆಲ್ಲುವರು
ಕೆಟ್ಟ ಪ್ರೀತಿ ಹೊಂದುವರು.

ಹೆಂಗಸನ್ನು, ಅದರಲ್ಲೂ ಗಂಡ ಸತ್ತವಳನ್ನು
ಅವಳದೆಲ್ಲವನ್ನೂ ಕಾಲಕಸ ಮಾಡಿ
ಕೊರಡುಮಾಡಿ,
ಸ್ವರ್ಗಾರೋಹಣ ಮಾಡಿಸುವೆನೆಂದು
ಸತ್ತವನ ಜೊತೆಗೆ ಸಿದಿಗೆ ಬದಿಗೆಗೆ ಕಟ್ಟಿ
ಸಕಲ ಭಾಜಾ ಭಜಂತ್ರಿಯಲ್ಲಿ
ಅಮಾನುಷ ಮಂತ್ರ, ಘೋಷಣೆಗಳ ಒದರುತ್ತ
ದುರ್ವ್ಯಕ್ತಿಗಳು ಮೆರವಣಿಗೆಯಲ್ಲಿ ಹೊತ್ತು ತಂದು
ವಾಸನೆ ಬರದಿರಲೆಂದು
ಸುವಾಸನಾ ಕಟ್ಟಿಗೆಗಳಿಂದ ನಿರ್ಮಿಸಿದ ಚಿತೆಯ ಮೇಲಿಟ್ಟು
ಕೆಂಪು ಕಣಿಗಲೆ ಹೂವುಗಳಲ್ಲಿ ಅರ್ಚಿಸಿ,
ಸತ್ತವರ ಅಪೂರ್ವ ಮೌನ ಗೋಷ್ಠಿಯಲ್ಲಿ
ಯಮ ಕಿಂಕರರ ಕಾವಲಿನಲ್ಲಿ
ಪೆಟ್ರೋಲ್ ಸುರಿದು ಧಗ್ಗನೆ ಉರಿ ಹೊತ್ತಿಸಿ
ಚಿಟಿಲ್, ಚಿಟಿಲ್ ಅಂತ ಉರಿ ಧಗ, ಧಗ ಉರಿಯುತ್ತಿದ್ದರೆ
ಇವರಿಗೆ ಎಲ್ಲಿಲ್ಲದ ಹುರುಪು
ಆ ಪಾಪದ ಹೆಣ್ಣು ಮಗಳು ಉರಿ, ಸಂಕಟ ತಾಳಲಾರದೆ
ಕಿರಿಚಾಡುವುದನ್ನು, ಒದರಾಡುವುದನ್ನು
ಸುಮ್ಮನೆ ಕಣ್ಣು ಬಿಟ್ಟು ಕೊಂಡು ನೋಡುತ್ತ
ಜೈ, ಜೈ ಕಾರ ಹಾಕುತ್ತಿರುತ್ತಾರೆ.
ಅವಳು ಪೂರ್ಣವಾಗಿ ಸುಟ್ಟು ಬೂದಿಯಾಗಿ
ಅದು ತಣ್ಣಗಾಗಿ ಆರುವವರೆವಿಗೆ
ಆ ಕಾಲಿನ ಭಾರ ಈ ಕಾಲಿಗೆ ವರ್ಗಾಯಿಸದಂತೆ
ಕಾದಿರುತ್ತಾರೆ.

ನಂತರ, ಪ್ರೇತ ಗೀತೆ ಹಾಡುತ್ತ, ಹೆಜ್ಜೆ ಹಾಕುತ್ತ
ಪ್ರದಕ್ಷಿಣೆ ಬಂದು
ಅಮಾನವೀಯ ಧನ್ಯತೆಯ ಕುರುಹಾಗಿ
ಆ ಚಿತಾ ಭಸ್ಮವನ್ನು ಮಸ್ತಕಗಳಲ್ಲಿ ಧರಿಸುವವರು ಯಾರೋ!
ಉಡಿಗಳಲ್ಲಿ ತುಂಬಿ ಕೊಳ್ಳುವವರು ಯಾರೋ!
ಭವಿಷ್ಯ ವಿರದವರ ಕೆಟ್ಟ ಸಡಗರವ
ನೋಡ ಬಾರದು!!
ಈ ಮನುಷ್ಯರು ಒಳ್ಳೆಯದಕ್ಕೆಂದರೆ ತಲೆ ಹೊಯ್ದರೂ
ಮುಂದೆ ಬರುವುದಿಲ್ಲ.
ಇಂತಹುದಕ್ಕಾದರೆ ನೀನ ಕರಿ ಬೇಡ ಹಿಂಡು, ಹಿಂಡು ಬರುತ್ತಾರಲ್ಲಾ
ಏನಿದು!
ಥೂ!! ಇಂತಾ ಜನ್ಮ ಏಳೇಳು ಜನ್ಮಕ್ಕೂ… ಕೊಟ್ಟರೂ…
ನನಗೆ ಬೇಡ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...