ಅಮಾನುಷ

ದೇವರು, ಧರ್ಮವೆಂದರೆ ಸಾಕು
ಶಾಕಿನಿ, ಢಾಕಿನಿ ಪಿಶಾಚಿಗಳಾಗುವರು
ಮನುಷ್ಯರನ್ನು ಹೆಣ್ಣು, ಗಂಡನ್ನದೆ, ಶಿಶುಗಳನ್ನೂ ಬಿಡದೆ
ಜೀವದಲ್ಲಿದ್ದಂತೆಯೇ
ಹಸಿ ಹಸಿ ಮಾಂಸ, ಖಂಡಗಳನ್ನು ಹರಿಹರಿದು ಜಗಿಯುತ್ತ
ಬಿಸಿ, ಬಿಸಿ ರಕ್ತವನ್ನು ಗಟ ಗಟ ಕುಡಿಯುತ್ತ
ಮೂಳೆಗಳನ್ನು ಕಟ ಕಟ ಕಡಿಯುತ್ತ
ಭಯಂಕರ ಉನ್ಮಾದದ ನಗೆ ನಗುತ್ತ
ಹೃದಯ ವಿಜ್ರಾವಕವಾಗಿ ಕಿರಿಚುತ್ತ
ಪ್ರಳಯದ ಕುಣಿತದಲ್ಲಿ ತೊಡಗುವರು.

ನಾನಾ ಕಾರಣಗಳಿಗಾಗಿ
ಇವರ ಸುಲಭ ತುತ್ತಾಗುವರು
ಪ್ರೀತಿ ಪಾತ್ರರಾಗುವವರೆಂದರೆ ಹೆಂಗಸರು, ಮಕ್ಕಳು.

ಮಕ್ಕಳ ಒಂದೊಂದೇ ಎಳೆಯ ಭಾಗವನ್ನು
ಕತ್ತರಿಸಿ, ಕತ್ತರಿಸಿ,
ವಿಕೃತ ಭಕ್ತಿಯಲ್ಲಿ,
ಬಹು ಅಕ್ಕರೆಯಿಂದ,
ನಿಧಾನವಾಗಿ, ವಿಧಿಪೂರ್ವಕವಾಗಿ ನೈವೇದ್ಯ ಮಾಡುವರು
ಪ್ರಸಾದವೆಂದು ಕಣ್ಣಿಗೊತ್ತಿಕೊಂಡು
ಚಿಗುರೆಲೆಯಂತೆ ಮೆಲ್ಲುವರು
ಕೆಟ್ಟ ಪ್ರೀತಿ ಹೊಂದುವರು.

ಹೆಂಗಸನ್ನು, ಅದರಲ್ಲೂ ಗಂಡ ಸತ್ತವಳನ್ನು
ಅವಳದೆಲ್ಲವನ್ನೂ ಕಾಲಕಸ ಮಾಡಿ
ಕೊರಡುಮಾಡಿ,
ಸ್ವರ್ಗಾರೋಹಣ ಮಾಡಿಸುವೆನೆಂದು
ಸತ್ತವನ ಜೊತೆಗೆ ಸಿದಿಗೆ ಬದಿಗೆಗೆ ಕಟ್ಟಿ
ಸಕಲ ಭಾಜಾ ಭಜಂತ್ರಿಯಲ್ಲಿ
ಅಮಾನುಷ ಮಂತ್ರ, ಘೋಷಣೆಗಳ ಒದರುತ್ತ
ದುರ್ವ್ಯಕ್ತಿಗಳು ಮೆರವಣಿಗೆಯಲ್ಲಿ ಹೊತ್ತು ತಂದು
ವಾಸನೆ ಬರದಿರಲೆಂದು
ಸುವಾಸನಾ ಕಟ್ಟಿಗೆಗಳಿಂದ ನಿರ್ಮಿಸಿದ ಚಿತೆಯ ಮೇಲಿಟ್ಟು
ಕೆಂಪು ಕಣಿಗಲೆ ಹೂವುಗಳಲ್ಲಿ ಅರ್ಚಿಸಿ,
ಸತ್ತವರ ಅಪೂರ್ವ ಮೌನ ಗೋಷ್ಠಿಯಲ್ಲಿ
ಯಮ ಕಿಂಕರರ ಕಾವಲಿನಲ್ಲಿ
ಪೆಟ್ರೋಲ್ ಸುರಿದು ಧಗ್ಗನೆ ಉರಿ ಹೊತ್ತಿಸಿ
ಚಿಟಿಲ್, ಚಿಟಿಲ್ ಅಂತ ಉರಿ ಧಗ, ಧಗ ಉರಿಯುತ್ತಿದ್ದರೆ
ಇವರಿಗೆ ಎಲ್ಲಿಲ್ಲದ ಹುರುಪು
ಆ ಪಾಪದ ಹೆಣ್ಣು ಮಗಳು ಉರಿ, ಸಂಕಟ ತಾಳಲಾರದೆ
ಕಿರಿಚಾಡುವುದನ್ನು, ಒದರಾಡುವುದನ್ನು
ಸುಮ್ಮನೆ ಕಣ್ಣು ಬಿಟ್ಟು ಕೊಂಡು ನೋಡುತ್ತ
ಜೈ, ಜೈ ಕಾರ ಹಾಕುತ್ತಿರುತ್ತಾರೆ.
ಅವಳು ಪೂರ್ಣವಾಗಿ ಸುಟ್ಟು ಬೂದಿಯಾಗಿ
ಅದು ತಣ್ಣಗಾಗಿ ಆರುವವರೆವಿಗೆ
ಆ ಕಾಲಿನ ಭಾರ ಈ ಕಾಲಿಗೆ ವರ್ಗಾಯಿಸದಂತೆ
ಕಾದಿರುತ್ತಾರೆ.

ನಂತರ, ಪ್ರೇತ ಗೀತೆ ಹಾಡುತ್ತ, ಹೆಜ್ಜೆ ಹಾಕುತ್ತ
ಪ್ರದಕ್ಷಿಣೆ ಬಂದು
ಅಮಾನವೀಯ ಧನ್ಯತೆಯ ಕುರುಹಾಗಿ
ಆ ಚಿತಾ ಭಸ್ಮವನ್ನು ಮಸ್ತಕಗಳಲ್ಲಿ ಧರಿಸುವವರು ಯಾರೋ!
ಉಡಿಗಳಲ್ಲಿ ತುಂಬಿ ಕೊಳ್ಳುವವರು ಯಾರೋ!
ಭವಿಷ್ಯ ವಿರದವರ ಕೆಟ್ಟ ಸಡಗರವ
ನೋಡ ಬಾರದು!!
ಈ ಮನುಷ್ಯರು ಒಳ್ಳೆಯದಕ್ಕೆಂದರೆ ತಲೆ ಹೊಯ್ದರೂ
ಮುಂದೆ ಬರುವುದಿಲ್ಲ.
ಇಂತಹುದಕ್ಕಾದರೆ ನೀನ ಕರಿ ಬೇಡ ಹಿಂಡು, ಹಿಂಡು ಬರುತ್ತಾರಲ್ಲಾ
ಏನಿದು!
ಥೂ!! ಇಂತಾ ಜನ್ಮ ಏಳೇಳು ಜನ್ಮಕ್ಕೂ… ಕೊಟ್ಟರೂ…
ನನಗೆ ಬೇಡ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕುತೂಹಲ ಎಷ್ಟೊಂದು!
Next post ಬೆಲೆ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys