Home / ಲೇಖನ / ವಿಜ್ಞಾನ / ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಅನೇಕ ವನಸ್ಪತಿಗಳಿಂದ, ಆಹಾರಬೆಳೆಗಳಿಂದ ಎಣ್ಣೆಯನ್ನು ತಯಾರಿಸಿ ಔಷಧಿ ರೂಪದಲ್ಲಿಯೂ, ಆಹಾರದಲ್ಲಿಯೂ ಬಳೆಸಲಾಗುತ್ತದೆ. ಇದೀಗ ಹೊಂಗೆ ಮರದ ಬೀಜದಿಂದ, ಬೇವಿನ ಮರದ ಬೀಜದಿಂದ ಉತ್ಪಾದಿಸಲ್ಪಟ್ಟ ಎಣ್ಣೆಗಳಿಂದ ಯಂತ್ರಗಳನ್ನು ನಡೆಸಬಹುದೆಂದು ಭಾರತೀಯ ವಿಜ್ಞಾನ ಸಂಸ್ಥೆಯ ಅಂಗಸಂಸ್ಥೆಯಾದ ‘ಸೂತ್ರ’ವು ಕಂಡು ಹಿಡಿದಿದೆ. ಇದರಿಂದ ಮುಂದೊಂದು ದಿನ ವಿದೇಶಿ ಡಿಜಲ್ ಬರದಾಗುತ್ತದೆ ಮತ್ತು ಡಿಜರ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಈ ಎಣ್ಣೆಗಳನ್ನೇ ಬಳೆಸುವ ಕಾಲ ಬರಬಹುದು. ಒಂದು ಕೆ.ಜಿ. ಹೊಂಗೆ ಎಣ್ಣೆ ಅಥವಾ ಬೇವಿನ ಎಣ್ಣೆಯ ಉತ್ವಾದನೆಗೆ ೪ ಕೆ.ಜಿ. ಬೀಜಬೇಕಾಗುತ್ತದಷ್ಟೆ. ಡಿಜಲ್ ಯಂತ್ರಗಳಿಗೆ ವಾಹನಗಳಿಗೆ ಈ ಎಣ್ಣೆಯನ್ನು ಬಳೆಸಬಹುದು ಎಂದು ಕಂಡು ಹಿಡಿಯಲಾಗಿದೆ. ಈಗಾಗಲೇ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ವಿದ್ಯುತ್ ಉತ್ಪಾದಿಸಲು ಪ್ರಯೋಗಿಕವಾಗಿ ಈ ಎಣ್ಣೆಯನ್ನು ಬಳೆಸಲಾಗುತ್ತದೆ. ದಿನದಿನವೂ ಹೆಚ್ಚುತ್ತಿರುವ ಡಿಜಲ್ ಬೆಲೆಯ ದುಬಾರಿ ದರದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಈ ಸಂಸ್ಕರಿಸಿದ ಹೊಂಗೆ, ಅಥವಾ ಬೇವಿನ ಎಣ್ಣೆಯನ್ನು ಯಂತ್ರಗಳಿಗೆ ಬಳಸಿ ಸಮಸ್ಯೆಗಳನ್ನು ಪರಿಸರಿಸಿಕೊಳ್ಳಬಹುದು.

ಈ ಎರಡು ತರಹದ ಎಣ್ಣೆ ತೆಗೆಯುವುದರಿಂದ ಬಹಳ ಉಪಯೋಗವು ಕೂಡ ಇರುತ್ತದೆ. ಈ ಎಣ್ಣೆ ತೆಗೆದ ನಂತರ ಇವುಗಳ ಹಿಂಡಿಯನ್ನು ರೈತರು ತಮ್ಮ ತೆಂಗು, ಅಡಿಕೆ, ಬಾಳೆ ತೋಟಗಳಿಗೆ, ಗದ್ದೆಗಳಿಗೆ ಗೊಬ್ಬರವನ್ನಾಗಿಯೂ ಸಹ ಬಳಸಬಹುದು. ಇದರಿಂದ ಭೂಮಿಯ ಫಲವತ್ತತೆಯೂ ಹೆಚ್ಚಾಗುವುದರ ಜತೆಗೆ ಗಿಡಗಳಿಗೆ ಯಾವುದೇ ರೋಗ ರುಜೀನಗಳು ಬರುವುದಿಲ್ಲ ಮತ್ತು ಹೆಚ್ಚು ಇಳುವರಿಯೂ ಕೂಡ ಬರುತ್ತದೆ. ಇಂಥಹ ಸಾಹಸವನ್ನು ರೈತರು ಯತೇಚ್ಛೆವಾಗಿ ಮಾಡಿ ಮಾದರಿ ಕೃಷಿಕರಾಗಬಹುದು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...