Home / ಲೇಖನ / ವಿಜ್ಞಾನ / ತಂಬಾಕಿನ ‘ನಿಕೋಟಿನ್’ನಿಂದ ಸಸ್ಯಗಳ ರೋಗ ನಿವಾರಕ ಔಷಧಿ

ತಂಬಾಕಿನ ‘ನಿಕೋಟಿನ್’ನಿಂದ ಸಸ್ಯಗಳ ರೋಗ ನಿವಾರಕ ಔಷಧಿ

‘ತಂಬಾಕು’ ಭಾರತದ ವಾಣಿಜ್ಯ ಬೆಳೆಯಾಗಿದ್ದು, “ನಿಕೋಟಿಯಾನ್ ಟಿಬ್ಯಾತಮ್” ಎಂಬ ಸಸ್ಯವರ್ಗಕ್ಕೆ ಸೇರಿದೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಇದನ್ನು ಹೆಚ್ಚಾಗಿ ಬೆಳೆಯುತ್ತಾರೆ. ಇದರ ಸೇವನೆ ಆರೋಗ್ಯಕ್ಕೆ ಹಾನಿಕರ, ಎಂದು ವೈದ್ಯಕೀಯವಾಗಿ ದೃಧೀಕರಿಸಿದೆಯಾದರೂ ಈ ವ್ಯಾಮೋಹದಿಂದ ಬಹಳಜನ ಹೊರಬರಲಾಗಿಲ್ಲ.

ತಂಬಾಕಿನಲ್ಲಿರುವ ‘ನಿಕೋಟಿನ್’ ಅಪಾಯಕಾರಿ ವಿಷವಾಗಿದ್ದು ಇದರ ಅರ್ಧ ಹನಿಯನ್ನು ಸೇವಿಸಿದರೆ ಮನುಷ್ಯನ ಪ್ರಾಣವೇ ಹೋಗಬಹುದು. ಈ ನಿಕೋಟಿನ್ ಜತೆಗೆ ಪರ್ಘರಾತ್, ಪೈರಿಡಿನ್, ಅವೋನಿಯಾ, ಆಲ್ಡಿಹೈಡ್, ಎಂಬ ವಿಷಕಾರಕ ವಸ್ತುಗಳು ಈ ತಂಬಾಕಿನಲ್ಲಿವೆ. ಇಂಥಹ ಅಪಾಯಕಾರಕ ತಂಬಾಕನ್ನು ನಮ್ಮ ವಿಜ್ಞಾನಿಗಳು ರೈತನಿಗೆ ಉಪಯುಕ್ತವಾಗುವಂತೆ ೧೯೮೨ರಲ್ಲಿ ಸಂಶೋಧಿಸಿದ್ದಾರೆ. ರೈತನು ಬೆಳೆಯುವ ಈ ಸೊಪ್ಪು, ರೈತನ ಬೆಳೆಗಳನ್ನು ಹಾಳುಗೆಡುವ ಕೀಟಗಳನಾಶಕ್ಕೆ ಬಳಸಲಾಗುತ್ತದೆ. ಮತ್ತು ಇದು ಜನಪ್ರಿಯ ಕೀಟನಾಶಕವೂ ಕೂಡ ಆಗಿದೆ. ಈ ಕೀಟನಾಶಕವು ಬಿಳಿ ನೊಣ, ಸಸ್ಯ ಹೇನು, ಥ್ರಿಪ್ಸ್ ಮತು ನುಸಿಪೀಡೆಗಳ ನಿಯಂತ್ರಣಕ್ಕೆ ಹಾಗೂ ಅವುಗಳ ನಾಶಕ್ಕೆ ತುಂಬ ಉಪಕಾರಿಯಾಗಿದೆ. ತಂಬಾಕಿನಲ್ಲಿರುವ ‘ನಿಕೋಟಿನ್’ ಕೀಟನಾಶಕವು ಕೀಟಗಳ ಶ್ವಾಸನಳಿಕೆ, ತ್ವಚೆ ಮತ್ತು ಆಹಾರದ ಮೂಲಕ ದೇಹವನ್ನು ಒಳಸೇರಿ ಅವುಗಳ ನರಮಂಡಲದ ಕಾರ್ಯಚಟುವಟಿಕೆಯಲಿ ಏರುಪೇರುಂಟಾಗಿ ಅವು ಸಾಯುವಂತೆ ಮಾಡುತ್ತದೆ.

ಕೀಟನಾಶಕವನ್ನು ತಯಾರಿಸುವ ವಿಧಾನ : ಈ ಕ್ರಿಮಿನಾಶಕವನ್ನು ರೈತರು ಮನೆಯಲ್ಲಿಯೇ ತಯಾರಿಸಬಹುದಾಗಿದೆ. ಮೊದಲು ೧೦ ಲೀಟರ್ ನೀರು, ಒಂದು ಕೆ.ಜಿ. ಯಷ್ಟಾದ ತಾಜಾ ತಂಬಾಕಿನ ಎಲೆಗಳನ್ನು ತೆಗೆದುಕೊಳ್ಳಬೇಕು. ಈ ತಂಬಾಕಿನ ಎಲೆಗಳನ್ನು ಹತ್ತು ಲೀಟರ್ ನೀರನಲ್ಲಿ ಹಾಕಿ ಚೆನ್ನಾಗಿ ಕುದಿಸಬೇಕು. ನೀರಿನಲ್ಲಿ ಕುದಿಸಿ ಹದಗೊಂಡ ಎಲೆಗಳನ್ನು ಹಿಂಡಿ ಕಷಾಯ ತಯಾರಿಸಬೇಕು ಈ ಕಷಾಯಕ್ಕೆ ಪುನಹ ೧೦ ಲೀಟರ್ ನೀರನ್ನು ಸೇರಿಸಿ ಚನ್ನಾಗಿ ಕಲಕಬೇಕು. ಈ ಕಷಾಯವು ಚನ್ನಾಗಿ ಕೆಲಸ ಮಾಡಲು ಹಾಗೂ ಬೆಳಗಳ ಮೇಲೆ ಸರಿಯಾಗಿ ಹರಡಲು ಸಿಂಪಡಿಸುವ ಮುನ್ನ ಕಷಾಯಕ್ಕೆ ೧೦೦ ಗ್ರಾಂ ಸಾಬೂನಿನ (ಸೋಪಿನ ಪುಡಿ) ಪುಡಿಯನ್ನು ಸೇರಿಸಬೇಕು. ಇದು ಮಾರುಕಟ್ಟೆಯಲ್ಲಿ ಪುಡಿರೂಪದಲ್ಲಿ ಹಾಗೂ ದ್ರವ ರೂಪದಲಿ ದೊರೆಯುತ್ತದೆ. ‘ನಿಕೋಟಿನ್’ ಪುಡಿಯನ್ನು ಸಸ್ಯಗಳ ಮೇಲೆ ಸಿಂಪಡಿಸಿದಾಗ ಅದು ವಾತಾವರಣದಲ್ಲಿರುವ ತೇವಾಂಶದೊಡನೆ ಬೆರೆತು ‘ನಿಕೋಟಿನ್’ ಎಂಬ ವಿಷ ವಸ್ತುವನ್ನು ಬಿಡುಗಡೆ ಮಾಡಿ ಕೀಟಗಳು ನಾಶವಾಗುತ್ತವೆ. ದ್ರವರೂಪದ ತಂಬಾಕನ್ನು ಸಿಂಪಡಿಸುವಾಗ ಸುಣ್ಣ ಅಥವಾ ಸಾಬೂನಿನ ಪುಡಿಯನ್ನು ಮಿಶ್ರಮಾಡಿ ಚನ್ನಾಗಿ ಕಲಿಸಿ ಸಿಂಪಡಿಸಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...