ತೇಲು

ನಿನ್ನ ತೆರೆದ ಆಕಾಶದ ಮನೆಯಲ್ಲಿ
ಎದೆ ತೆರೆದು ಯಾವ ಅರಿಕೆಯಿಲ್ಲದೇ
ನಾನು ಹಾಡುತ್ತಿದ್ದೇನೆ ಮತ್ತೆ ಎಲ್ಲ
ರೂಹುಗಳ ಕಳಚಿಕೊಂಡ ರೆಕ್ಕೆಗಳು ಈಗ
ವಿಶಿಷ್ಠವಾಗಿದೆ.

ಓಣಿಯ ಕೆಸರು ದಾಟಿದ ಹೆಜ್ಜೆಗಳು
ಬಯಲ ಸಂಭ್ರಮದಲ್ಲಿ ಬದುಕ ಅರಳಿಸಿ
ಖಾಯಂ ಆಗಿ ಖುಷಿಯಿಂದ ಹಾರುತ್ತಿದ್ದಾರೆ
ಹಗುರವಾಗಿ ಅವರ ಕಾಲುಗಳು ಓಲಾಡುತ್ತಿವೆ.

ತೆರೆದ ಆಕಾಶದಲಿ ಎಲ್ಲ ಮೋಡಗಳ
ಘರ್ಜನೆಯಲಿ ಮಿಂಚು ಫಳಫಳಿಸಿ
ಹಕ್ಕಿಯಾಗಿ ಹಾರಾಡಿದ ಅವನ ಒಲವು
ಮೇಘ ಮಲ್ಹಾರದ ರಾಗಗಳು ಭೂಮಿಯ
ಸಂತೈಸಿವೆ.

ಬದುಕಿನಾಚೆಯ ಸಾವಿನಾಚೆಯ ಬೆಳಕು
ಕವಿತೆಗಳು ನದಿಯಾಗಿ ಹರಿದು ಹಸಿರು
ಹಬ್ಬಿದ ಜನದ ಸಂಭ್ರಮಕೆ ದೀಪಗಳು
ಉರಿದಿವೆ ನಿನ್ನ ವಿಶಾಲ ದೇವರ ಮನೆಯು
ಅಲಂಕರಿಸಿಕೊಂಡಿದೆ.

ಅಲ್ಲಿಯದೋ ಇಲ್ಲಿಯದೋ ಮನಸ್ಸು
ಮುದಗೊಂಡ ಆಲಾಪಗಳು, ಹಸಿರು ಬಯಲು
ಬಿಳಿ ಮೋಡಗಳು, ನೀಲಿ ಆಕಾಶದಲಿ ನಕ್ಷತ್ರಗಳು
ಸಿರಿ ಸಗ್ಗ ಹೂಗಳರಳಿ ನೆಟ್ಟ ಸಸಿ ಫಲ ಶಾಂತಿ
ವಶವರ್ತಿಗೊಂಡಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಗದ ಜೋಗಿ ನೀನು
Next post ಮೂಲವರಿಯದೆ ಪಥ್ಯವಿಲ್ಲದೆ ಚಿಕಿತ್ಸೆ ಫಲಿಸೀತೇ?

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…