Home / ಕವನ / ಕವಿತೆ / ಇವರೇ ನನ್ನವರು

ಇವರೇ ನನ್ನವರು

ಇದು ಬುರ್ಖಾ.
ಶತಮಾನಗಳಿಂದ
ಹಲವಾರು
ನಾನು ಮರುಮಾತಿಲ್ಲದೆ
ಮೌನವಾಗಿ
ಹೊತ್ತು ಬಂದ ಬುರ್ಖಾ.
ಅಂದು ಹಿಂದೂಮ್ಮೆ
ಇದರ ಒಳಗೆಯೇ ನಾನು
ಸಿಡಿಮಿಡಿಕೊಂಡು
ಮೌನವಾಗಿ ಮಿಡಿಕಿದ್ದೆ.
ಬಿಕ್ಕಳಿಸಿ ಅತ್ತಿದ್ದೆ.
ಬಿಡುಗಡೆಗಾಗಿ ಹಲುಬಿದ್ದ.

ಬಾಲ್ಯದ ಆ ನೆನಪು
ಈಗಲೂ ಮಾಸಿಲ್ಲ
ನನಗಿನ್ನೂ ನೆನಪಿದೆ
ಅಂದು ಗೆಳೆಯರ ಮಧ್ಯ.

ಆನಂದದಿಂದ ನಲಿಯುತ್ತಿದ್ದೆ.
ಹರ್ಷದಿಂದ ನಲಿಯುತ್ತಿದ್ದೆ.
ಹದಿಮೂರರಲ್ಲೊಮ್ಮೆ
ಏನಾಯಿತೋ ಕಾಣೆ.
ನೀನೀಗ ಹೆಂಗುಸಾದೆ
ಎಂದರು ನನ್ನವರು.

ಮೂಲಿಯಲಿ ಕೂಡಿಸಿ
ಮರೆಮಾಡಿ ತಿನ್ನಿಸಿ
ಮುದ್ದೆಯಾಗಿ ಬೆಳೆಸಿದರು ನನ್ನ
ಸೂರ್ಯನನೇ ಕಾಣದ ದೇಹ
ಕ್ಷಯದ ಆಗರವಾಗಿ
ಹಳದಿಯಾಗಲು ಕೊನೆಗೆ
ಸೌಂದರ್ಯ ಹೆಚ್ಚಿದೆಯೆಂದು
ಗೌರವದೀ ಕಂಡರು ನನ್ನ.

ಶಾಸ್ರೋಕ್ತವಾದ ದಾಸ್ಯತ್ವ ವಹಿಸಿ,
ದೊಡ್ಡವಳಾದುದಕ್ಕೆ ಲೈಸನ್ಸ್
ಕೊಡಿಸಿದರು ನನ್ನ.
ಬೆಳೆಯಲಿರುವ ಚಿಗುರಿಗೆ
ಮೂಲದಲ್ಲೇ ಚಿವುಟಿ
ಮುಳ್ಳಿನಾ ಬೇಲಿಯಿಟ್ಟು
ವ್ಯಕ್ತಿತ್ವಕ್ಕೆ ಕೊಳ್ಳಿಯಿಟ್ಟು
ಆಕ್ರಮಣ ಮಾಡಿದರು ಇವರು
ಇವರೇ ನನ್ನವರು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...