ಉಪ್ಪರಿಗೆ ಕೆಳಗೆ

ಗೆಳತಿ,
ಅಂದು ಅಮವಾಸ್ಯೆ ಕಳೆದು
ಹುಣ್ಣಿಮೆ ಬರುತ್ತಿತ್ತು
ಹೊಳೆವ ಚಿಕ್ಕಿಗಳ ಮಧ್ಯ
ಚಂದ್ರನ ಹಾಲು ಬೆಳದಿಂಗಳು,
ಹೊಗಳಿ ವಣ್ಣಿಸುತ್ತಿದ್ದೆ-
ಚುಕ್ಕೆ ಚಂದ್ರಮನು,
ಭಾವುಕಳಾಗಿದ್ದೆ,
ಮೈಮರೆತು ನೋಡುತ್ತಿದ್ದೆ.

ಏನು ಹೊಳೆಯಿತೋ ನಿನಗೆ
ಚುಚ್ಚಿ ಎಬ್ಬಿಸಿ ನನ್ನ
ಉಪ್ಪರಿಗೆ ಕೆಳಗಿದ್ದ
ಕಪ್ಪು ಜನಗಳ ತೋರಿದ್ದೆ ನನ್ನ.

ಆಕಾಶದಡಿಯಲ್ಲಿ ಅಂಗಾತ
ಮಲಗಿದ್ದ ನನ್ನಕ್ಕ ತಂಗಿಯರು
ತೊಟ್ಟ ಸೀರೆ-ಕುಪ್ಪಸಗಳಿಗೆ
ನೂರೆಂಟು ತೇಪೆಗಳ
ತೆರೆದು ತೋರಿದೆ ನನ್ನ,
ಕೊರೆವ ಚಳಿ, ಬಿರುಗಾಳಿ
ಬಿರುಸಾಗಿ ಬೀಳುವ
ಮಳೆಯಾಲಿ ಕಲ್ಲುಗಳಿಗೆ
ನಡುಗಿ – ನರಳಾಡಿ
ಉರುಳಿ – ಬೀಳುವ ನನ್ನವರ
ಜೋಪಡಿಯ ಸಾಲುಗಳನ್ನು,
ಊರ ಮುಂದುಗಡೆ
ಉಳ್ಳವರ ದನಗಳಿಗೆ ಮೇವಾಗಿ
ಬೆಳೆದಂಥ ಜನಗಳನು
ದಣಿಯ ಗದ್ದೆಯ ಒಳಗೆ
ದುರಿದು ಹಣ್ಣಾದಂಥ
ಹೂತು ಹೋಗಿರುವಂಥ
ಮೂಳೆಗಳನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಾಣಾ ನಾವಾಗದಿದೇನೆಲ್ಲದಕು ತಜ್ಞರವಲಂಬನೆಯೊ?
Next post ಯಾಕೆ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…