Home / ಕವನ / ಕವಿತೆ / ಬೆಳ್ಳಿ ಚುಕ್ಕಿ

ಬೆಳ್ಳಿ ಚುಕ್ಕಿ

ಸಭಾದಾಗ ಕೂತುಕೊಂಡು ಇವರು
ನಮ್ಮ ಮೇಲೆ ಕಾನೂನು ಮಾಡ್ತಾರ,
ಐದು ವರ್ಷಕ್ಕೊಮ್ಮೆ ಕಾರಿನ್ಯಾಗ ಕೂತಗೊಂಡು
ಓಟ ಕೇಳಲಿಕ್ಕೆ ಬರತಾರ.
ನಮ್ಮ ಉದ್ಧಾರವೇ ತಮ್ಮ ಧೈಯ
ಅಂತ ಹೇಳಿ ಘೋಷಣೆ ಕೊಡ್ತಾರ
ಆ ನನ್ಮಕ್ಕಳ ಚರ್ಮ ಸುಲೀಬೇಕನಸ್ತಾದ.
ನಾವು ಇವರಿಗೆ ಬ್ಯಾಡಂತ.
ನಮ್ಮ ಓಟ ಮಾತ್ರ ಬೇಕಂತ.
ಊರಾಗ ನಾವು ಇದ್ರ ಸರಿ
ಕಾಣೋದಿಲ್ಲಂತ ಬುಲ್ಡೊಜರ ಹಚ್ಚಿ
ನಮ್ಮ ಗುಡಿಸಲು ನೆಲಸಮ ಮಾಡ್ತಾರ.
ಆಗಾಗ ಅವಕ್ಕೆ ಬೆಂಕಿ ಇಟ್ಟು
ಹೋಳಿ ಆಡ್ತಾರ ಜೀವಂತ ಸುಡ್ತಾರ
ಆ ಪರದೇಶಿಗಳು ಬಂದಾಗ
ನಮ್ಮ ಜೋಪಡಿ ಅವರ ಕಣ್ಣಿಗೆ ಬೀಳದಂಗ
ಭಾಳ ಎಚ್ಚರಿಕೆ ವಹಿಸಿ,
ಅವರ ಜೊತೆಗೇನೆ ತಿರಗ್ತಾರ.
ಆಗಾಗ ನಮ್ಮ ಉದ್ಧಾರಕ್ಕೆ
ಸಭೆನೂ ಕರೀತಾರ
ಸನ್ಮಾನ ಮಾಡ್ಕೊತಾರ
ಎರ್‌ಕಂಡಿಷನ್ ಕಾರಿನ್ಯಾಗ ಕೂತು
ಹಾರ ಹಾಕ್ಕೋತಾರ.
ನಮ್ಮ ಉದ್ಧಾರಕ್ಕ ಹೊರಟಾರಿವರು.
ನಮ್ಮ ಮ್ಯಾಲೇನೇ ದೊಡ್ಡ ದೊಡ್ಡ
ಕಾನೂನಿನ ಪುಸ್ತಕನೂ ಬರ್‍ದಾರಿವರು
ಅಂದು ಗಾಂಧಿ ಮುದುಕ
ಅರ್ಧಕ್ಕೆ ಬಿಟ್ಟ ಕೆಲಸ ಪೂರ್ತಿ
ಮಾಡಾಕ ಹತ್ತಾರಂತ ಇವರು.
ಅವನ ಹೆಸರಿನ ಮಂತ್ರ
ಆಗ್ಯಾದ ಇವರ ರಾಜಕೀಯ ತಂತ್ರ
ಅವನ ಟೊಪ್ಪಿಗಿ ಹಾಕ್ಕೊಂಡು
ಓಟ ಕೇಳಲಿಕ್ಕೆ ಬರತಾರಿವರು.
ನಾವು ಹಸಿವಿನಿಂದ ಸಾಯ್ತಿದ್ದೀವಿ
ಹೊಟ್ಟೆ ಬಟ್ಟೆ ಕಟ್ಟಿ ಅಸಮತೆಯ
ತ್ಯಾಗ ಬೇಯಾಕತ್ತೀವಿ.
ತಣಯ ಕಾಲೀಗಿ ಬೂಟು ಮೆಟ್ಟು ಹೊಲಿದು
ಬರಿಗಾಲಿಂದು ತಿರುಗಾಕತ್ತೀವಿ
ನಮ್ಮ ಕೇಂಪನ್ನ ರಕ್ತ ಸುಟ್ಟು
ಕಪ್ಪನ ಹೊಗೆಯರಾಗಿ,
ಕಾರ್ಖಾನೆ ಕೊಳವೆಯಿಂದ
ಕರಿಮೋಡಾಗಿ ಹೊರಹೊಮ್ಮಲಿಕತ್ತ್ಯಾದ
ಸುತ್ತೆಲ್ಲಾ ಭೀಕರ ಕತ್ತಲ ಮುತ್ತ್ಯಾದ
ಅಲ್ಲಿ ನೋಡು ಮೋಡದಲ್ಲಿ.
ಬೆಳ್ಳಿಚುಕ್ಕಿಯೊಂದು ಹೊಳಿಲಿಕತ್ತ್ಯಾದ
ಅದರ ಬೆಳಕಿನ್ಯಾಗ
ಮುಂದಕ್ಕ ಸಾಗೋಣ ನಾವು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...