Home / ಕವನ / ಕವಿತೆ / ಬೆಳ್ಳಿ ಚುಕ್ಕಿ

ಬೆಳ್ಳಿ ಚುಕ್ಕಿ

ಸಭಾದಾಗ ಕೂತುಕೊಂಡು ಇವರು
ನಮ್ಮ ಮೇಲೆ ಕಾನೂನು ಮಾಡ್ತಾರ,
ಐದು ವರ್ಷಕ್ಕೊಮ್ಮೆ ಕಾರಿನ್ಯಾಗ ಕೂತಗೊಂಡು
ಓಟ ಕೇಳಲಿಕ್ಕೆ ಬರತಾರ.
ನಮ್ಮ ಉದ್ಧಾರವೇ ತಮ್ಮ ಧೈಯ
ಅಂತ ಹೇಳಿ ಘೋಷಣೆ ಕೊಡ್ತಾರ
ಆ ನನ್ಮಕ್ಕಳ ಚರ್ಮ ಸುಲೀಬೇಕನಸ್ತಾದ.
ನಾವು ಇವರಿಗೆ ಬ್ಯಾಡಂತ.
ನಮ್ಮ ಓಟ ಮಾತ್ರ ಬೇಕಂತ.
ಊರಾಗ ನಾವು ಇದ್ರ ಸರಿ
ಕಾಣೋದಿಲ್ಲಂತ ಬುಲ್ಡೊಜರ ಹಚ್ಚಿ
ನಮ್ಮ ಗುಡಿಸಲು ನೆಲಸಮ ಮಾಡ್ತಾರ.
ಆಗಾಗ ಅವಕ್ಕೆ ಬೆಂಕಿ ಇಟ್ಟು
ಹೋಳಿ ಆಡ್ತಾರ ಜೀವಂತ ಸುಡ್ತಾರ
ಆ ಪರದೇಶಿಗಳು ಬಂದಾಗ
ನಮ್ಮ ಜೋಪಡಿ ಅವರ ಕಣ್ಣಿಗೆ ಬೀಳದಂಗ
ಭಾಳ ಎಚ್ಚರಿಕೆ ವಹಿಸಿ,
ಅವರ ಜೊತೆಗೇನೆ ತಿರಗ್ತಾರ.
ಆಗಾಗ ನಮ್ಮ ಉದ್ಧಾರಕ್ಕೆ
ಸಭೆನೂ ಕರೀತಾರ
ಸನ್ಮಾನ ಮಾಡ್ಕೊತಾರ
ಎರ್‌ಕಂಡಿಷನ್ ಕಾರಿನ್ಯಾಗ ಕೂತು
ಹಾರ ಹಾಕ್ಕೋತಾರ.
ನಮ್ಮ ಉದ್ಧಾರಕ್ಕ ಹೊರಟಾರಿವರು.
ನಮ್ಮ ಮ್ಯಾಲೇನೇ ದೊಡ್ಡ ದೊಡ್ಡ
ಕಾನೂನಿನ ಪುಸ್ತಕನೂ ಬರ್‍ದಾರಿವರು
ಅಂದು ಗಾಂಧಿ ಮುದುಕ
ಅರ್ಧಕ್ಕೆ ಬಿಟ್ಟ ಕೆಲಸ ಪೂರ್ತಿ
ಮಾಡಾಕ ಹತ್ತಾರಂತ ಇವರು.
ಅವನ ಹೆಸರಿನ ಮಂತ್ರ
ಆಗ್ಯಾದ ಇವರ ರಾಜಕೀಯ ತಂತ್ರ
ಅವನ ಟೊಪ್ಪಿಗಿ ಹಾಕ್ಕೊಂಡು
ಓಟ ಕೇಳಲಿಕ್ಕೆ ಬರತಾರಿವರು.
ನಾವು ಹಸಿವಿನಿಂದ ಸಾಯ್ತಿದ್ದೀವಿ
ಹೊಟ್ಟೆ ಬಟ್ಟೆ ಕಟ್ಟಿ ಅಸಮತೆಯ
ತ್ಯಾಗ ಬೇಯಾಕತ್ತೀವಿ.
ತಣಯ ಕಾಲೀಗಿ ಬೂಟು ಮೆಟ್ಟು ಹೊಲಿದು
ಬರಿಗಾಲಿಂದು ತಿರುಗಾಕತ್ತೀವಿ
ನಮ್ಮ ಕೇಂಪನ್ನ ರಕ್ತ ಸುಟ್ಟು
ಕಪ್ಪನ ಹೊಗೆಯರಾಗಿ,
ಕಾರ್ಖಾನೆ ಕೊಳವೆಯಿಂದ
ಕರಿಮೋಡಾಗಿ ಹೊರಹೊಮ್ಮಲಿಕತ್ತ್ಯಾದ
ಸುತ್ತೆಲ್ಲಾ ಭೀಕರ ಕತ್ತಲ ಮುತ್ತ್ಯಾದ
ಅಲ್ಲಿ ನೋಡು ಮೋಡದಲ್ಲಿ.
ಬೆಳ್ಳಿಚುಕ್ಕಿಯೊಂದು ಹೊಳಿಲಿಕತ್ತ್ಯಾದ
ಅದರ ಬೆಳಕಿನ್ಯಾಗ
ಮುಂದಕ್ಕ ಸಾಗೋಣ ನಾವು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...