Home / ಕವನ / ಕವಿತೆ / ಬೆಳ್ಳಿ ಚುಕ್ಕಿ

ಬೆಳ್ಳಿ ಚುಕ್ಕಿ

ಸಭಾದಾಗ ಕೂತುಕೊಂಡು ಇವರು
ನಮ್ಮ ಮೇಲೆ ಕಾನೂನು ಮಾಡ್ತಾರ,
ಐದು ವರ್ಷಕ್ಕೊಮ್ಮೆ ಕಾರಿನ್ಯಾಗ ಕೂತಗೊಂಡು
ಓಟ ಕೇಳಲಿಕ್ಕೆ ಬರತಾರ.
ನಮ್ಮ ಉದ್ಧಾರವೇ ತಮ್ಮ ಧೈಯ
ಅಂತ ಹೇಳಿ ಘೋಷಣೆ ಕೊಡ್ತಾರ
ಆ ನನ್ಮಕ್ಕಳ ಚರ್ಮ ಸುಲೀಬೇಕನಸ್ತಾದ.
ನಾವು ಇವರಿಗೆ ಬ್ಯಾಡಂತ.
ನಮ್ಮ ಓಟ ಮಾತ್ರ ಬೇಕಂತ.
ಊರಾಗ ನಾವು ಇದ್ರ ಸರಿ
ಕಾಣೋದಿಲ್ಲಂತ ಬುಲ್ಡೊಜರ ಹಚ್ಚಿ
ನಮ್ಮ ಗುಡಿಸಲು ನೆಲಸಮ ಮಾಡ್ತಾರ.
ಆಗಾಗ ಅವಕ್ಕೆ ಬೆಂಕಿ ಇಟ್ಟು
ಹೋಳಿ ಆಡ್ತಾರ ಜೀವಂತ ಸುಡ್ತಾರ
ಆ ಪರದೇಶಿಗಳು ಬಂದಾಗ
ನಮ್ಮ ಜೋಪಡಿ ಅವರ ಕಣ್ಣಿಗೆ ಬೀಳದಂಗ
ಭಾಳ ಎಚ್ಚರಿಕೆ ವಹಿಸಿ,
ಅವರ ಜೊತೆಗೇನೆ ತಿರಗ್ತಾರ.
ಆಗಾಗ ನಮ್ಮ ಉದ್ಧಾರಕ್ಕೆ
ಸಭೆನೂ ಕರೀತಾರ
ಸನ್ಮಾನ ಮಾಡ್ಕೊತಾರ
ಎರ್‌ಕಂಡಿಷನ್ ಕಾರಿನ್ಯಾಗ ಕೂತು
ಹಾರ ಹಾಕ್ಕೋತಾರ.
ನಮ್ಮ ಉದ್ಧಾರಕ್ಕ ಹೊರಟಾರಿವರು.
ನಮ್ಮ ಮ್ಯಾಲೇನೇ ದೊಡ್ಡ ದೊಡ್ಡ
ಕಾನೂನಿನ ಪುಸ್ತಕನೂ ಬರ್‍ದಾರಿವರು
ಅಂದು ಗಾಂಧಿ ಮುದುಕ
ಅರ್ಧಕ್ಕೆ ಬಿಟ್ಟ ಕೆಲಸ ಪೂರ್ತಿ
ಮಾಡಾಕ ಹತ್ತಾರಂತ ಇವರು.
ಅವನ ಹೆಸರಿನ ಮಂತ್ರ
ಆಗ್ಯಾದ ಇವರ ರಾಜಕೀಯ ತಂತ್ರ
ಅವನ ಟೊಪ್ಪಿಗಿ ಹಾಕ್ಕೊಂಡು
ಓಟ ಕೇಳಲಿಕ್ಕೆ ಬರತಾರಿವರು.
ನಾವು ಹಸಿವಿನಿಂದ ಸಾಯ್ತಿದ್ದೀವಿ
ಹೊಟ್ಟೆ ಬಟ್ಟೆ ಕಟ್ಟಿ ಅಸಮತೆಯ
ತ್ಯಾಗ ಬೇಯಾಕತ್ತೀವಿ.
ತಣಯ ಕಾಲೀಗಿ ಬೂಟು ಮೆಟ್ಟು ಹೊಲಿದು
ಬರಿಗಾಲಿಂದು ತಿರುಗಾಕತ್ತೀವಿ
ನಮ್ಮ ಕೇಂಪನ್ನ ರಕ್ತ ಸುಟ್ಟು
ಕಪ್ಪನ ಹೊಗೆಯರಾಗಿ,
ಕಾರ್ಖಾನೆ ಕೊಳವೆಯಿಂದ
ಕರಿಮೋಡಾಗಿ ಹೊರಹೊಮ್ಮಲಿಕತ್ತ್ಯಾದ
ಸುತ್ತೆಲ್ಲಾ ಭೀಕರ ಕತ್ತಲ ಮುತ್ತ್ಯಾದ
ಅಲ್ಲಿ ನೋಡು ಮೋಡದಲ್ಲಿ.
ಬೆಳ್ಳಿಚುಕ್ಕಿಯೊಂದು ಹೊಳಿಲಿಕತ್ತ್ಯಾದ
ಅದರ ಬೆಳಕಿನ್ಯಾಗ
ಮುಂದಕ್ಕ ಸಾಗೋಣ ನಾವು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...