Home / ಕವನ / ಕವಿತೆ / ನನಗೆ ಮಾತನಾಡಲು ಬಿಡಿ

ನನಗೆ ಮಾತನಾಡಲು ಬಿಡಿ

ನನ್ನ ಬಂಧುಗಳೇ,
ನಾನು ತಲೆಯೆತ್ತಿ ನಡೆದರೆ,
ನಿಮಗೆ ಅಹಂಕಾರಿಯಂತೆ ಕಾಣುವೆನು

ತಲೆ ಬಗ್ಗಿಸಿ ನಡೆದರೆ,
ಅಬಲೆ, ಅಪರಾಧಿಯಂತೆ ಕಾಣುವೆನು.
ಮೌನವಾಗಿದ್ದರೆ ಮೂಕಿ, ಎನ್ನುವಿರಿ.
ಮಾತನಾಡಿದರೆ ವಾಚಾಳಿ ಎನ್ನುವಿರಿ.
ಹೇಳಿ ನಾನು ಹೇಗೆ ನಡೆದುಕೊಳ್ಳಲಿ ?

ನಿಮ್ಮ ಈ ಅಪಮಾನವನ್ನು ನಾನು
ಎಲ್ಲಿಯವರಿಗೆ ಸಹಿಸಲಿ? ನೀವೇ ಹೇಳಿ.
ಎಲ್ಲಿಯವರೆಗೆ ಎದೆಯಲಿ ಸಹಿಸುವ
ಜ್ವಾಲೆಯನ್ನು ಸಹಿಸಿಕೊಂಡಿರಲಿ?
ಹೇಳಿ? ನೀವೇ ಹೇಳಿ ಬಂಧುಗಳೇ.

ಎಲ್ಲಿಯವರೆಗೆ ನಾನು ನಿಮ್ಮ
ಮಾರಾಟದ ಸರಕುಗಳಿಗೆ
ವಿಜ್ಞಾಪನಾ ವಸ್ತುವಾಗಿರಲಿ?
ಎಲ್ಲ ಸ್ತ್ರೀಯ ಸೌಂದರ್ಯದ ಹಿಂದೆ
ಒಂದಿಲ್ಲೊಂದು ರಹಸ್ಯವಿದೆಯೆಂದು ಹೇಳುವಿರಿ,
ಅದುವೇ ನಿಮ್ಮ “ಫೌಂಡೇಶನ್ ಕ್ರೀಮ್”
ಎಂದು ಪ್ರಚಾರ ಗಿಟ್ಟಿಸುವಿರಿ.
ಹೇಳಿ ನಾನು ಎಲ್ಲಿಯವರೆಗೆ
ಅಗ್ಗದ ಪ್ರಚಾರ ಮಾಧ್ಯಮವಾಗಿರಲಿ?
ಎಲ್ಲಿಯವರೆಗೆ ನೀವು ಸೃಷ್ಟಿಸಿದ
“ಮಿಥಿಕ್” ಬಂಧಿಯಾಗಿರಲಿ?
ಹೇಳಿ ಬಂಧುಗಳೇ ನೀವೇ ಹೇಳಿ.

ನಾನು ಎಲ್ಲಿಯವರೆಗೆ
ನಿಮ್ಮ ಮನೋರಂಜನೆಯ
ಮಾಧ್ಯಮವಾಗಿರಲಿ?
ಹೆಣ್ಣು ದೇವತೆಯೆಂದು ಹೇಳುವಿರಿ.
ಮತ್ತೇ ಅವಳ ವ್ಯಾಪಾರ ಮಾಡುವಿರಿ,
ಇಂತಹ ನಿಮ್ಮ ಭೋಗ ಸಂಸ್ಕೃತಿಯನ್ನು
ಕಂಡ ನಾನು ಇದನ್ನು
ಉಚ್ಚ ಸಂಸ್ಕೃತಿಯೆಂದು
ಹೇಗೆ ಹೇಳಲಿ?
ನೀವೇ ಹೇಳಿ ಬಂಧುಗಳೇ,
ನೀವೇ ಹೇಳಿ,
ಇಲ್ಲ ನೀವು, ಹೇಳುವದಿಲ್ಲ.
ಅದಕ್ಕೆ-
ನಾನೀಗ ಸುಮ್ಮನಿರಲಾರೆ,
ನನ್ನ ಬಾಯಿಯನ್ನು
ಸಂಪ್ರದಾಯಗಳ ಬೇಡಿಯಿಂದ
ಬಿಗಿಯಬೇಡಿ.
ನನಗೆ ಮಾತನಾಡಲು ಬಿಡಿ.

ಶತಮಾನಗಳ
ಭಯಂಕರ ಮೌನವನು
ಮುರಿದು ಮಾತನಾಡಲೇಬೇಕು.
ಬದುಕಿಯೂ ಸತ್ತಂತಿರುವ
ಕ್ರೂರ ಬದುಕನು ಬಹಿಷ್ಕರಿಸಿ
ಬಯಲಿಗೆ ಬರಲೇಬೇಕು.

ಬಿಟ್ಟುಬಿಡಿ ನನ್ನ ಬಂಧಿಸಬೇಡಿ
ನಿಮ್ಮ ಕ್ರೂರ ಕೈಗಳಿಂದ.
ಮೂಕ ಬದುಕನು ಬಿಟ್ಟು
ನಾನು ಮಾತನಾಡಲೇಬೇಕು.
ಸಂಘರ್ಷದ ಹಾದಿಯಲ್ಲಿ ಸಾಗಲೇಬೇಕು
ಬಿಟ್ಟುಬಿಡಿ ನನ್ನ ಬಂಧಿಸಬೇಡಿ
ಸಂಪ್ರದಾಯಗಳ ಶೈಯಿಲೆಯಿಂದ
ಬಿಟ್ಟು ಬಿಡಿ ನನ್ನ ಬಿಟ್ಟು ಬಿಡಿ
ನನಗೆ ವಾತನಾಡಲು ಬಿಡಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...