Home / ಕವನ / ಕವಿತೆ / ಆಶಾಬೀ

ಆಶಾಬೀ

ಜೀವನದಲ್ಲಿ ಕೇವಲ
ಹಸಿವು, ನೋವುಂಡು
ಬೆಳೆದವಳು ಆಶಾಬೀ.

ಹಸಿವಿನ ಕ್ರೂರ ಕೂಗನ್ನು
ಕೇಳಲಾರದೇ ಒಂದು ದಿನ
ತನ್ನೆರಡು ಹಸಳೆಗಳೊಡನೆ
ನೀರಿನ ಪಾಲಾದಳು.

ಆದರೆ, ಸಾವು ವಿಚಿತ್ರ.
ಅಲ್ಲಿಯೂ ಅವಳಿಗೆ ಸಹಕರಿಸಲಿಲ್ಲ.
ತನ್ನ ಕರುಳ ಕುಡಿಗಳ
ಕತ್ತನ್ನು ಹಿಸುಕಿದ ಅವಳು
ಕೊನೆಗೂ ಬದುಕಿಕೊಂಡಳು,
ಆದರೆ, ಕಾನೂನಿನ ಕ್ರೂರ
ಕೈಗಳಿಗೆ ಸಿಲುಕಿ
ನಲುಗಿ ಹೋದಳು.

ಜೈಲಿನ ಕಂಬಿಗಳ ಹಿಂದೆ
ಕ್ರೂರವಾದ ಬದುಕು
ಕತ್ತಲ ಕೋಣೆಯಲ್ಲಿ
ನಿರ್ವಾಹವಿಲ್ಲದೇ
ದಿನ ನೂಕುತ್ತಿದ್ದಳು.

ಸಾಯಲು ಕಾನೂನು
ಸಮ್ಮತಿಸುತ್ತಿಲ್ಲ.
– ಬದುಕಲು ಅವಳಿಗೆ ಇಷ್ಟವಿಲ್ಲ.
ಬಡತನದ ಬೇಗೆಯಲಿ
ಬೆಂದು ಹೋದ ಆಶಾಬಿಯ
ಎರಡು ಆಶೆಯ ಕುಡಿಗಳೂ
ಈಗ ಕಮರಿ ಹೋಗಿದ್ದವು.

ಬದುಕಲು ಮನಸ್ಸು ಒಪ್ಪದು
ಸಾಯಲು ಕಾನೂನು ಬಿಡದು
ಅಸಹಾಯಕತೆಯ ನಿಟ್ಟುಸಿರು
ಅವಳನ್ನು ಸುಟ್ಟು ಬಿಡುತ್ತಿತ್ತು.
ಮುದ್ದು ಕಂದಂಮ್ಮಗಳ ನೆನಪು
ಅವಳ ಕರುಳನ್ನು ಕೊರೆಯುತ್ತಿತ್ತು.

ಪುಟ್ಟ ಕಂದಮ್ಮಗಳ
ಕಪಟವರಿಯದ
ಮುದ್ದು ಮುಖಗಳ ನೆನಪು
ರಕ್ತ ಹೆಪ್ಪುಗಟ್ಟಿಸುತ್ತದೆ.
ಕಣುಗಳೂ ಸದಾ ಹಸಿ ಹಸಿ.

ಆದರೆ ಮರುಕ್ಷಣವೇ ಅವಳ ಕೈಗಳು
ಕಬ್ಬಿಣದಂತೆ ಗಟ್ಟಿಯಾಗುತ್ತವೆ.
ತನ್ನನ್ನು ಈ ಸ್ಥಿತಿಗೆ ದೂಡಿದ
ನಾಚಿಕೆಯಿಲ್ಲದ ವ್ಯವಸ್ಥೆಯ
ವಿರುದ್ಧ ಹೋರಾಡಲು
ತನ್ನ ನಿರಪರಾಧಿ ಕೂಸುಗಳಿಗೆ

ನ್ಯಾಯ ದೊರಕಿಸಿ ಕೊಡಲು
ಅವರ ಹಸಿವನ್ನು ನೀಗಿಸಲು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...