Home / ಕವನ / ಕವಿತೆ / ಕೆಂಪು ದೀಪದ ಕೆಳಗೆ

ಕೆಂಪು ದೀಪದ ಕೆಳಗೆ

ಹನ್ನೆರಡು ವರ್ಷದವಳಿದ್ದಾಗ,
ನನ್ನ ಮದುವೆ ಆಯಿತು.
ದಿನಾಲೂ ಆರು ಗಂಟೆಗೆ
ಎದ್ದು ಕೂಳು ಕುದಿಸಿ,
ಸೂರ್ಯ ಕಣ್ಣು ತೆರೆಯುವ ಮೊದಲೇ
ಭತ್ತ ಕೊಯ್ಯಲು ಹೋಗುತ್ತಿದ್ದೆ.
ಸಂಜೆ ತಂದ ಕೂಲಿಯೆಲ್ಲ
ಗಂಡ ಕಿತ್ತುಕೊಳ್ಳುತ್ತಿದ್ದ.
ಕುಡಿದು ಬಂದು
ಮನಬಂದಂತೆ ಬಡಿಯುತ್ತಿದ್ದ.
ಉಪವಾಸವಿದ್ದ ಹೊಟ್ಟೆ
ಮೇಲಿ೦ದ ಹೊಡೆತಗಳ
ಸಹಿಸಬೇಕಿತ್ತು.
ನಾನೇನೋ ಸಹಿಸಬಹುದು,
ಉಪವಾಸವಿರಬಹುದು
ಆದರೆ ನನ್ನ ಮಕ್ಕಳು
ಹಸಿವಿನಿಂದ ಬಳಲುವುದನ್ನು
ಸಹಿಸಲಸಾಧ್ಯವಾಗುತ್ತಿದ್ದು,

ದಿನದಿನಕ್ಕೆ ಬುದುಕು
ಸಂಕೀರ್ಣವಾಗುತ್ತಿತ್ತು,
ನನ್ನ ಶರೀರ ದಿನದಿನವೂ
ಯಾತನ ಶಿಬಿರವಾಗುತ್ತಿತ್ತು.
ಈಗ ನಾನು
ಪಾತ್ರೆ ತೊಳೆಯುತ್ತೇನೆ.
ಕಸ ಗುಡಿಸುತ್ತೇನೆ
ಬಟ್ಟೆ ಒಗೆಯುತ್ತೇನೆ.
ನಮ್ಮ ಮಾಲೀಕರ
ಮಕ್ಕಳನ್ನು ಆಡಿಸುತ್ತೇನೆ.

ಒಂದು ದಿನ –
ಅಂದು ಮಾಲೀಕರ
ಮನೆಗೆಲಸಕ್ಕೆ ಹೋಗಿದ್ದೆ,
ಮನೆಯ ಮಂದಿಯಲ್ಲ
ಸಿನಿಮಾಕ್ಕೆ ಹೋಗಿದ್ದರು,
ಮಾಲೀಕರು ನನ್ನ
ತಂದೆಯ ವಯಸ್ಸಿನವರು
ಅವರ ಮೇಲೆ ನನಗೆ
ಪೂರ್ಣ ವಿಶ್ವಾಸವಿತ್ತು.
ಆದರೆ ಅವರು ನನ್ನ ವಿಶ್ವಾಸವನ್ನು
ನುಚ್ಚು ನೂರಾಗಿಸಿದ್ದರು.

ಅದನ್ನು ಕಂಡ ಅವನ ಪತ್ನಿ
ನನ್ನನ್ನೇ ಹೊಡೆದು ದೂರಕ್ಕಟ್ಟಿದಳು
ಗಂಡನೂ ಮನೆಯಿಂದ
ದೂರ ಮಾಡಿದನು
ಅಂದಿನಿಂದ ಇಂದಿನವರೆಗೆ
ಈ ಕೆಂಪು ದೀಪದ
ಕೆಳಗೆ ಕುಳಿತು
ನನ್ನ ಮಕ್ಕಳು ಬರುವ
ದಾರಿ ನೋಡುತ್ತಿರುವೆ.
ಬದುಕಿನ ಕೊನೆಯ
ಅಂಚಿನಲ್ಲಿರುವ ಅವರು
ಈಗಲೂ ಬರುವುದಿಲ್ಲವೇನೋ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...