Home / ಕವನ / ಕವಿತೆ / ಕೆಂಪು ದೀಪದ ಕೆಳಗೆ

ಕೆಂಪು ದೀಪದ ಕೆಳಗೆ

ಹನ್ನೆರಡು ವರ್ಷದವಳಿದ್ದಾಗ,
ನನ್ನ ಮದುವೆ ಆಯಿತು.
ದಿನಾಲೂ ಆರು ಗಂಟೆಗೆ
ಎದ್ದು ಕೂಳು ಕುದಿಸಿ,
ಸೂರ್ಯ ಕಣ್ಣು ತೆರೆಯುವ ಮೊದಲೇ
ಭತ್ತ ಕೊಯ್ಯಲು ಹೋಗುತ್ತಿದ್ದೆ.
ಸಂಜೆ ತಂದ ಕೂಲಿಯೆಲ್ಲ
ಗಂಡ ಕಿತ್ತುಕೊಳ್ಳುತ್ತಿದ್ದ.
ಕುಡಿದು ಬಂದು
ಮನಬಂದಂತೆ ಬಡಿಯುತ್ತಿದ್ದ.
ಉಪವಾಸವಿದ್ದ ಹೊಟ್ಟೆ
ಮೇಲಿ೦ದ ಹೊಡೆತಗಳ
ಸಹಿಸಬೇಕಿತ್ತು.
ನಾನೇನೋ ಸಹಿಸಬಹುದು,
ಉಪವಾಸವಿರಬಹುದು
ಆದರೆ ನನ್ನ ಮಕ್ಕಳು
ಹಸಿವಿನಿಂದ ಬಳಲುವುದನ್ನು
ಸಹಿಸಲಸಾಧ್ಯವಾಗುತ್ತಿದ್ದು,

ದಿನದಿನಕ್ಕೆ ಬುದುಕು
ಸಂಕೀರ್ಣವಾಗುತ್ತಿತ್ತು,
ನನ್ನ ಶರೀರ ದಿನದಿನವೂ
ಯಾತನ ಶಿಬಿರವಾಗುತ್ತಿತ್ತು.
ಈಗ ನಾನು
ಪಾತ್ರೆ ತೊಳೆಯುತ್ತೇನೆ.
ಕಸ ಗುಡಿಸುತ್ತೇನೆ
ಬಟ್ಟೆ ಒಗೆಯುತ್ತೇನೆ.
ನಮ್ಮ ಮಾಲೀಕರ
ಮಕ್ಕಳನ್ನು ಆಡಿಸುತ್ತೇನೆ.

ಒಂದು ದಿನ –
ಅಂದು ಮಾಲೀಕರ
ಮನೆಗೆಲಸಕ್ಕೆ ಹೋಗಿದ್ದೆ,
ಮನೆಯ ಮಂದಿಯಲ್ಲ
ಸಿನಿಮಾಕ್ಕೆ ಹೋಗಿದ್ದರು,
ಮಾಲೀಕರು ನನ್ನ
ತಂದೆಯ ವಯಸ್ಸಿನವರು
ಅವರ ಮೇಲೆ ನನಗೆ
ಪೂರ್ಣ ವಿಶ್ವಾಸವಿತ್ತು.
ಆದರೆ ಅವರು ನನ್ನ ವಿಶ್ವಾಸವನ್ನು
ನುಚ್ಚು ನೂರಾಗಿಸಿದ್ದರು.

ಅದನ್ನು ಕಂಡ ಅವನ ಪತ್ನಿ
ನನ್ನನ್ನೇ ಹೊಡೆದು ದೂರಕ್ಕಟ್ಟಿದಳು
ಗಂಡನೂ ಮನೆಯಿಂದ
ದೂರ ಮಾಡಿದನು
ಅಂದಿನಿಂದ ಇಂದಿನವರೆಗೆ
ಈ ಕೆಂಪು ದೀಪದ
ಕೆಳಗೆ ಕುಳಿತು
ನನ್ನ ಮಕ್ಕಳು ಬರುವ
ದಾರಿ ನೋಡುತ್ತಿರುವೆ.
ಬದುಕಿನ ಕೊನೆಯ
ಅಂಚಿನಲ್ಲಿರುವ ಅವರು
ಈಗಲೂ ಬರುವುದಿಲ್ಲವೇನೋ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...