ಬಿಡುಗಡೆಯ ಕವಿತೆ

ಹೆಣ್ಣಾಗಿ ಹುಟ್ಟಿದೆನೆಂದು
ಹಣೆಬರಹಕೆ ಹಳಿಯದಿರು,
ನಿನ್ನ ತುಳಿದವರು
ನಾಚಿ ನೀರಾಗುವ ಕಾಲ
ದೂರವಿಲ್ಲ ಕೇಳು.

ಮನು ಮಹಾಶಯರ
ಧರ್ಮ ಶಾಸ್ತ್ರಗಳ ಹೊತ್ತು
ಗೊಡ್ಡು ವಿಚಾರಗಳಿಗೆ ತಲೆಕೊಟ್ಟು
ಕೆರೆ-ಬಾವಿಗಳಿಗೆ
ಹಾರವಾಗುವದ ನಿಲ್ಲಿಸು,

ತುಂಬಿದ ಸಭೆಯಲ್ಲಿ
ಅಸಹಾಯಕಳಾಗಿ ನಿಂತು
ಸೀರೆಯನು ಸೆಳಸಿಕೊಳ್ಳುತ್ತ
ಅವಮಾನದ ಬೆಂಕಿಯಲಿ
ಬೇಯುವದ ನಿಲ್ಲಿಸು.

ಸಂಶಯದ ಸುಳಿಗೆ ಸಿಕ್ಕು
ಅಗ್ನಿ ಪರೀಕ್ಷೆಗೆ ಮೈಯೊಡ್ಡಿ
ಶೀಲವನ್ನು ಶಂಕಿಸಿಕೊಳ್ಳುವ
ಸೀತೆಯಾಗುವದ ನಿಲ್ಲಿಸು.

ಹೃದಯಹೀನರ ಸಂತೆಯಲಿ
ಕೇವಲ ವಸ್ತುವಾಗಿ,
ಹೊಡೆತಕ್ಕೆ ಮೈಕೊಟ್ಟು,
ಒಳಗೊಳಗೇ ರೋದಿಸುವ
ಕಪ್ಪು ಕತ್ತಲೆ ಕೋಣೆಗೆ
ಕೈದಿಯಾಗುವುದ ನಿಲ್ಲಿಸು.

ನಿನ್ನೊಡಲ ತುಂಬ
ಈಡೇರದೇ ಬಿಕ್ಕುತಿಹ
ಸತ್ತಬಯಕೆಗಳ ಚೀತ್ಕಾರ
ಸಂಪ್ರದಾಯಗಳ ಕಪ್ಪು ಹೊಗೆ
ದಟ್ಟ ನೋವಿನ ಛಾಯೆಗೆ
ಧ್ವನಿಯ ನೀಡು.

ನಾನು, ನೀನು, ಸೀತೆ
ಮತ್ತೆ ದೌಪದಿ
ಎಲ್ಲರೂ ನೊಂದವರು,
ದಾಸ್ಯದ ಕೊಂಡಿ ಕಳಚಿ
ಹೊರಗೆ ಬಾ ಗೆಳತಿ,

ಕೈಗೆ ಕೈ ಕೂಡಿಸು
ನವಚೇತನ ನಮ್ಮದು
ಬದುಕಿನ ಹೋರಾಟ
ಮುಗಿಯಲಿಲ್ಲ ಗೆಳತಿ
ಮುಗಿಯಲಿಲ್ಲವೋ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಕ್ತಿ ಮೂಲಗಳೇರದೆ ಪರಿಸರವನುಳಿಸುವುದೆಂತು?
Next post ದೂರ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys