ಬಿಡುಗಡೆಯ ಕವಿತೆ

ಹೆಣ್ಣಾಗಿ ಹುಟ್ಟಿದೆನೆಂದು
ಹಣೆಬರಹಕೆ ಹಳಿಯದಿರು,
ನಿನ್ನ ತುಳಿದವರು
ನಾಚಿ ನೀರಾಗುವ ಕಾಲ
ದೂರವಿಲ್ಲ ಕೇಳು.

ಮನು ಮಹಾಶಯರ
ಧರ್ಮ ಶಾಸ್ತ್ರಗಳ ಹೊತ್ತು
ಗೊಡ್ಡು ವಿಚಾರಗಳಿಗೆ ತಲೆಕೊಟ್ಟು
ಕೆರೆ-ಬಾವಿಗಳಿಗೆ
ಹಾರವಾಗುವದ ನಿಲ್ಲಿಸು,

ತುಂಬಿದ ಸಭೆಯಲ್ಲಿ
ಅಸಹಾಯಕಳಾಗಿ ನಿಂತು
ಸೀರೆಯನು ಸೆಳಸಿಕೊಳ್ಳುತ್ತ
ಅವಮಾನದ ಬೆಂಕಿಯಲಿ
ಬೇಯುವದ ನಿಲ್ಲಿಸು.

ಸಂಶಯದ ಸುಳಿಗೆ ಸಿಕ್ಕು
ಅಗ್ನಿ ಪರೀಕ್ಷೆಗೆ ಮೈಯೊಡ್ಡಿ
ಶೀಲವನ್ನು ಶಂಕಿಸಿಕೊಳ್ಳುವ
ಸೀತೆಯಾಗುವದ ನಿಲ್ಲಿಸು.

ಹೃದಯಹೀನರ ಸಂತೆಯಲಿ
ಕೇವಲ ವಸ್ತುವಾಗಿ,
ಹೊಡೆತಕ್ಕೆ ಮೈಕೊಟ್ಟು,
ಒಳಗೊಳಗೇ ರೋದಿಸುವ
ಕಪ್ಪು ಕತ್ತಲೆ ಕೋಣೆಗೆ
ಕೈದಿಯಾಗುವುದ ನಿಲ್ಲಿಸು.

ನಿನ್ನೊಡಲ ತುಂಬ
ಈಡೇರದೇ ಬಿಕ್ಕುತಿಹ
ಸತ್ತಬಯಕೆಗಳ ಚೀತ್ಕಾರ
ಸಂಪ್ರದಾಯಗಳ ಕಪ್ಪು ಹೊಗೆ
ದಟ್ಟ ನೋವಿನ ಛಾಯೆಗೆ
ಧ್ವನಿಯ ನೀಡು.

ನಾನು, ನೀನು, ಸೀತೆ
ಮತ್ತೆ ದೌಪದಿ
ಎಲ್ಲರೂ ನೊಂದವರು,
ದಾಸ್ಯದ ಕೊಂಡಿ ಕಳಚಿ
ಹೊರಗೆ ಬಾ ಗೆಳತಿ,

ಕೈಗೆ ಕೈ ಕೂಡಿಸು
ನವಚೇತನ ನಮ್ಮದು
ಬದುಕಿನ ಹೋರಾಟ
ಮುಗಿಯಲಿಲ್ಲ ಗೆಳತಿ
ಮುಗಿಯಲಿಲ್ಲವೋ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಕ್ತಿ ಮೂಲಗಳೇರದೆ ಪರಿಸರವನುಳಿಸುವುದೆಂತು?
Next post ದೂರ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…