Home / ಕವನ / ಕವಿತೆ / ರೇಷ್ಮೆ ಹುಳಗಳು

ರೇಷ್ಮೆ ಹುಳಗಳು

ದುಷ್ಟ ಗಂಗೋತ್ರಿಗೆ
ಗಂಡಂದಿರ ಬಲಿ ಕೊಟ್ಟ
ನಿಮಗೆ ಮುಂಡೆಯರ
ಪಟ್ಟವೇ ಗಟ್ಟಿಯಾಯಿತೇನು?

ಉಕ್ಕಿ ಬಂದ ನಿಮ್ಮ ಹರೆಯ
ಅಂತರಂಗದಲೇ ಹಿಂಗಿತೇನು?
ಮೆಟ್ಟಿಬಂದ ಕಣ್ಣೀರು
ಗೊಂಡಾರಣ್ಯದ ಗೂಢಕ್ಕಿಳಿದು
ಗಟ್ಟಿ ಘನವಾಯಿತೇನು?

ಸಿಡಿದು ಹೋದ ಕನಸುಗಳು
ಕಡಲಾಚೆಯ ನೋವುಗಳು
ಬೆಂಕಿಯಿಲ್ಲ ಕಿಡಿಯಿಲ್ಲ
ಬರೀ ಬೂದಿಯ ಗೂಡುಗಳು.

ಒಡೆದು ಹೋದ ಕನ್ನಡಿಯಲ್ಲಿ
ಛಿದ್ರಗೊಂಡ ಕನಸುಗಳನು
ಬದುಕಿನ ಮುಸ್ಸಂಜೆಯಲಿ
ಮತ್ತೆ ಹೇಗೆ ಸಂಧಿಸುವಿರಿ?

ಬಯಕೆಗಳ ಗೋರಿಯ ಮೇಲೆ
ತೃಪ್ತಿಯ ಮುಖವಾಡವನು
ಎಲ್ಲಿಯತನಕ ಧರಿಸುವಿರಿ?
ವಿಧವೆಯ ಹಣೆಪಟ್ಟಿ ಹೊತ್ತು
ಎಲ್ಲಿಯವರೆಗೆ ನರಳುವಿರಿ?

ಕೋಗಿಲೆಯ ಕತ್ತನು
ಹಿಸುಕುವ ನಿಮ್ಮ ವಸಂತಗಳು
ಚೈತ್ರದ ಚಿಗುರುಗಳು
ಕಮರಿದ ಆಸೆಗಳು
ಬಣ್ಣ ಕಳೆದುಕೊಂಡು
ಬರಡಾದ ಚಿತ್ರಗಳು

ನಿಮ್ಮಾಳದಲ್ಲಿ ಬೇರುಬಿಟ್ಟ
ಬಿಳಲುಗಳ ಬೊಡ್ದೆಗಳಿಗೆ
ಅಲುಗಾಡಿಸಲಾರದೇ ಏದುಸಿರು ಬಿಡುತ್ತ
ಎಲ್ಲಿಯವರೆಗೆ ಜೋತು ಬೀಳುವಿರಿ?

ಅಂತಸ್ತುಗಳ ಅಂಕುಶದಡಿಯಲಿ
ಅಧೀರವಾಗಿ ಅಂಕೆ ತಪ್ಪುವ
ನಿಮ್ಮ ಅತೃಪ್ತ ಆತ್ಮಗಳು
ಗೂಡಿನಲ್ಲಿಯೇ ಕೊನೆಗಾಣುವ
ರೇಷ್ಮೆಯ ಹುಳಗಳು.
*****

Tagged:

Leave a Reply

Your email address will not be published. Required fields are marked *

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...