Home / ಕವನ / ಕವಿತೆ / ಬಂಜೆಯಾಗಿದ್ದರೆ ಚೆನ್ನ

ಬಂಜೆಯಾಗಿದ್ದರೆ ಚೆನ್ನ

ಮಸೀದಿಗಳ ಉರುಳಿಸಿ
ಮಂದಿರಗಳ ಕಟ್ಟುವವರೇ
ಬಿದ್ದಿರುವ ಮನಗಳನ್ನೆಂತು
ಎತ್ತಿ ನಿಲ್ಲಿಸುವಿರಿ ಹೇಳಿ?
ಬಿದ್ದ ಗೋಡೆಗಳ ಮತ್ತೆ
ಎತ್ತಿ ನಿಲ್ಲಿಸಲೂ ಬಹುದು
ಎರಡು ಮನಗಳ ಮಧ್ಯ
ಎದ್ದ ಗೋಡೆಯನ್ನೆಂತು
ಬೀಳಿಸುವಿರಿ? ಹೇಳಿ.

ಕಂಡಿದ್ದೆವು ಹಿಂದೆ
ಚರಿತ್ರೆಯಲಿ ಕರಾಳ ದಿನ.
ಅಂದು ಹಿಂದೊಮ್ಮೆ
ಮಹಾತ್ಮ ಗಾಂಧಿಗೆ
ಗುಂಡಿಟ್ಟು ಕೊಂದ
ಈ ಚೆಡ್ಡಿ ವೀರರು,
ಇಂದು ಮಸೀದಿಯುರುಳಿಸಿ,
ಮುಖಕ್ಕೆ ಮಸಿ ಬಳಿದು
ಮತ್ತೊಂದು ಕಪ್ಪು ಚುಕ್ಕೆ
ಇಟ್ಟು ಹೋದವು ಚರಿತ್ರೆಗೆ.

ಡಿಸೆಂಬರ್ ಆರರಂದು
ಅಯೋಧ್ಯೆಯೆಡೆಗೆ
ಸಾಗರದಂತೆ ಹರಿದ
ಜನತೆಗೆ ಮತಿಗೆಡಿಸಿ,
ದಿಕ್ಕು ತಪ್ಪಿಸುವ ಧರ್ಮದ
ತುತ್ತೆಯನ್ನು ಕುಡಿಸಿ,
ಅವನತಿಯ ಶಿಖರವ
ಹತ್ತಿಸಿದವರೆ,
ಹೇಳಿ ನೀವು ನಿಜವಾದ
ಭಾರತ ಮಾತೆಯ ಮಕ್ಕಳೇ.

ಕರಸೇವಕರ ಕೈಯಲ್ಲಿ
ನಲುಗಿ ಹೋದ
ದೇವರು, ಧರ್ಮಗಳು –
ಮತ್ತೆಂದೂ ಮತಾಂಧರ
ಕೈಯಲ್ಲಿ ಸಿಕ್ಕಿಕೊಳ್ಳಲಾರೆನೆಂದು
ಪರಿತಪಿಸುತ್ತಿದ್ದರೆ-

ಭಾರತಾಂಬೆಯ ಕಣ್ಣುಗಳಲ್ಲಿ
ರಕ್ತದ ಕಣ್ಣೀರು-ಹರಿದು,
ಸಮತೆಯ ಎದೆಹಾಲು ಕುಡಿಸಿ,
ಪೊರೆದು ಪೋಷಿಸಿದ
ನನ್ನ ಮುಖಕ್ಕೇ
ಮಸಿ ಬಳಿದ ಇವರಿಗೆ
ನಾ ಕೊಟ್ಟ ಎದೆಹಾಲು
ವಿಷವಾಗಬಾರದಿತ್ತೆ?
ಎಂದು ಪರಿತಪಿಸುತ್ತಿರುವ
ಭಾರತ ಮಾತೇ ಹೇಳುತ್ತಿದ್ದಾಳೆ
“ಇಂತಹ ಮಕ್ಕಳನ್ನು
ಹೆರುವುದಕ್ಕೆ ಬದಲು
ನಾನು ಬಂಜೆಯಾಗಿದ್ದರೆ
ಎಷ್ಟೋ ಚೆನ್ನ” ಎಂದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...