Home / ಕವನ / ಕವಿತೆ / ಬಂಜೆಯಾಗಿದ್ದರೆ ಚೆನ್ನ

ಬಂಜೆಯಾಗಿದ್ದರೆ ಚೆನ್ನ

ಮಸೀದಿಗಳ ಉರುಳಿಸಿ
ಮಂದಿರಗಳ ಕಟ್ಟುವವರೇ
ಬಿದ್ದಿರುವ ಮನಗಳನ್ನೆಂತು
ಎತ್ತಿ ನಿಲ್ಲಿಸುವಿರಿ ಹೇಳಿ?
ಬಿದ್ದ ಗೋಡೆಗಳ ಮತ್ತೆ
ಎತ್ತಿ ನಿಲ್ಲಿಸಲೂ ಬಹುದು
ಎರಡು ಮನಗಳ ಮಧ್ಯ
ಎದ್ದ ಗೋಡೆಯನ್ನೆಂತು
ಬೀಳಿಸುವಿರಿ? ಹೇಳಿ.

ಕಂಡಿದ್ದೆವು ಹಿಂದೆ
ಚರಿತ್ರೆಯಲಿ ಕರಾಳ ದಿನ.
ಅಂದು ಹಿಂದೊಮ್ಮೆ
ಮಹಾತ್ಮ ಗಾಂಧಿಗೆ
ಗುಂಡಿಟ್ಟು ಕೊಂದ
ಈ ಚೆಡ್ಡಿ ವೀರರು,
ಇಂದು ಮಸೀದಿಯುರುಳಿಸಿ,
ಮುಖಕ್ಕೆ ಮಸಿ ಬಳಿದು
ಮತ್ತೊಂದು ಕಪ್ಪು ಚುಕ್ಕೆ
ಇಟ್ಟು ಹೋದವು ಚರಿತ್ರೆಗೆ.

ಡಿಸೆಂಬರ್ ಆರರಂದು
ಅಯೋಧ್ಯೆಯೆಡೆಗೆ
ಸಾಗರದಂತೆ ಹರಿದ
ಜನತೆಗೆ ಮತಿಗೆಡಿಸಿ,
ದಿಕ್ಕು ತಪ್ಪಿಸುವ ಧರ್ಮದ
ತುತ್ತೆಯನ್ನು ಕುಡಿಸಿ,
ಅವನತಿಯ ಶಿಖರವ
ಹತ್ತಿಸಿದವರೆ,
ಹೇಳಿ ನೀವು ನಿಜವಾದ
ಭಾರತ ಮಾತೆಯ ಮಕ್ಕಳೇ.

ಕರಸೇವಕರ ಕೈಯಲ್ಲಿ
ನಲುಗಿ ಹೋದ
ದೇವರು, ಧರ್ಮಗಳು –
ಮತ್ತೆಂದೂ ಮತಾಂಧರ
ಕೈಯಲ್ಲಿ ಸಿಕ್ಕಿಕೊಳ್ಳಲಾರೆನೆಂದು
ಪರಿತಪಿಸುತ್ತಿದ್ದರೆ-

ಭಾರತಾಂಬೆಯ ಕಣ್ಣುಗಳಲ್ಲಿ
ರಕ್ತದ ಕಣ್ಣೀರು-ಹರಿದು,
ಸಮತೆಯ ಎದೆಹಾಲು ಕುಡಿಸಿ,
ಪೊರೆದು ಪೋಷಿಸಿದ
ನನ್ನ ಮುಖಕ್ಕೇ
ಮಸಿ ಬಳಿದ ಇವರಿಗೆ
ನಾ ಕೊಟ್ಟ ಎದೆಹಾಲು
ವಿಷವಾಗಬಾರದಿತ್ತೆ?
ಎಂದು ಪರಿತಪಿಸುತ್ತಿರುವ
ಭಾರತ ಮಾತೇ ಹೇಳುತ್ತಿದ್ದಾಳೆ
“ಇಂತಹ ಮಕ್ಕಳನ್ನು
ಹೆರುವುದಕ್ಕೆ ಬದಲು
ನಾನು ಬಂಜೆಯಾಗಿದ್ದರೆ
ಎಷ್ಟೋ ಚೆನ್ನ” ಎಂದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...