ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನ್ನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಇಮಾರತ್ತು ಕಟ್ಟಿಸಿ,
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು
ಆದರೆ ನನ್ನ ಪ್ರೀಯತಮನ
ಹೃದಯಲೇ ಕಟ್ಟಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್.

ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು-
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್ಪದ ಮೊಹರುಗಳು ಕಂಡಾವು.
ಮುಮ್ತಾಜ್ ಯಮುನೆಯ
ತೀರದಲ್ಲೊಮ್ಮೆ ನಿಂತು
ಕಣ್ಬಿಟ್ಟು ನೋಡಿದರೆ ನಿನಗೆ
ವೀರ ಸೈನಿಕರ ರಕ್ತದಿಂದ
ತಿಳಿಜಲದ ಯಮುನೆ
ಕೆಂಪಾದುದ ಕಂಡೀತು.

ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಎನೆಂದು
ಎಲ್ಲರಿಗೂ ಗೊತ್ತು.
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲ್ಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೇಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡಶಿಲ್ಪಿಗಳ ಆಕ್ರಂದನಗಳೆಷ್ಟೋ
ಹೆಪ್ಪುಗಟ್ಟಿದ ಅವರ ಕನಸುಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಸಹ ತಾಜಮಹಲಿನ
ಮಿನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಅಳಿದು ಹೋಗುತ್ತಿರುವ
ಗೋರಿಗಳಲ್ಲಿ ಗುಣುಗುಟ್ಟುತ್ತದೆ.
ನೂಪುರಗಳ ನುಣುಪಾದ
ಗೋಡೆಗಳಲ್ಲಿ ರಕ್ತಸಿಕ್ತವಾಗುತ್ತದೆ.

ನಿನ್ನ ಬಾದಶಹನ ಹೃದಯದಲ್ಲಿ
ನೀನೊಬ್ಬಳೇನೂ ಅಲ್ಲ
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲ್ಲಿ ಮೈಮರವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕಿಕತ್ತುಗಳಿಂದ
ಸುತ್ತುವರೆದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಲೆಯಕ್ಷರಕ್ಕೂ ಕೃತಕಗೊಬ್ಬರಕ್ಕೂ ಏನಾದರೂ ವ್ಯತ್ಯಾಸವುಂಟಾ?
Next post ಅಡುಗೆ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

cheap jordans|wholesale air max|wholesale jordans|wholesale jewelry|wholesale jerseys