Home / ಕವನ / ಕವಿತೆ / ಮುಮ್ತಾಜಳ ಮಹಲು

ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನ್ನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಇಮಾರತ್ತು ಕಟ್ಟಿಸಿ,
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು
ಆದರೆ ನನ್ನ ಪ್ರೀಯತಮನ
ಹೃದಯಲೇ ಕಟ್ಟಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್.

ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು-
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್ಪದ ಮೊಹರುಗಳು ಕಂಡಾವು.
ಮುಮ್ತಾಜ್ ಯಮುನೆಯ
ತೀರದಲ್ಲೊಮ್ಮೆ ನಿಂತು
ಕಣ್ಬಿಟ್ಟು ನೋಡಿದರೆ ನಿನಗೆ
ವೀರ ಸೈನಿಕರ ರಕ್ತದಿಂದ
ತಿಳಿಜಲದ ಯಮುನೆ
ಕೆಂಪಾದುದ ಕಂಡೀತು.

ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಎನೆಂದು
ಎಲ್ಲರಿಗೂ ಗೊತ್ತು.
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲ್ಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೇಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡಶಿಲ್ಪಿಗಳ ಆಕ್ರಂದನಗಳೆಷ್ಟೋ
ಹೆಪ್ಪುಗಟ್ಟಿದ ಅವರ ಕನಸುಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಸಹ ತಾಜಮಹಲಿನ
ಮಿನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಅಳಿದು ಹೋಗುತ್ತಿರುವ
ಗೋರಿಗಳಲ್ಲಿ ಗುಣುಗುಟ್ಟುತ್ತದೆ.
ನೂಪುರಗಳ ನುಣುಪಾದ
ಗೋಡೆಗಳಲ್ಲಿ ರಕ್ತಸಿಕ್ತವಾಗುತ್ತದೆ.

ನಿನ್ನ ಬಾದಶಹನ ಹೃದಯದಲ್ಲಿ
ನೀನೊಬ್ಬಳೇನೂ ಅಲ್ಲ
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲ್ಲಿ ಮೈಮರವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕಿಕತ್ತುಗಳಿಂದ
ಸುತ್ತುವರೆದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...