ಮುಮ್ತಾಜಳ ಮಹಲು

ನನ್ನ ಅಖಂಡ ಪ್ರೀತಿಯನ್ನು
ನಿನ್ನ ಬೆಳ್ಳಿ ತಕ್ಕಡಿಯಲ್ಲಿಟ್ಟು
ತೂಗಬೇಡ ಮುಮ್ತಾಜ್
ದೌಲತ್ತಿನ ಆಸರೆಯಿಂದ
ನಿನ್ನ ಜಹಾಂಪನಾಹ್
ನಿನಗೊಂದು ಇಮಾರತ್ತು ಕಟ್ಟಿಸಿ,
ಅದರಲ್ಲಿ ನಿನ್ನ ಗೋರಿ ಮಾಡಿರಬಹುದು
ಆದರೆ ನನ್ನ ಪ್ರೀಯತಮನ
ಹೃದಯಲೇ ಕಟ್ಟಿದ
ಭಾವ ತುಂಬಿದ ಭವ್ಯ ಇಮಾರತ್ತಿಗೆ
ನಿನ್ನ ಅಮೃತ ಶಿಲೆಗಳು
ಸಾಟಿಯಾಗಲಾರವು ಮುಮ್ತಾಜ್.

ಪ್ರಿಯ ಮುಮ್ತಾಜ್
ನಿನ್ನ ಸುಂದರ ವದನದ ಮೇಲೆ
ಒಮ್ಮೆ ಕಣ್ಣಾಡಿಸಿ ನೋಡು-
ಅಲ್ಲಿ ನಿನ್ನ ಜಹಾಂಪನಾರ
ಶಾಹಿ ದರ್ಪದ ಮೊಹರುಗಳು ಕಂಡಾವು.
ಮುಮ್ತಾಜ್ ಯಮುನೆಯ
ತೀರದಲ್ಲೊಮ್ಮೆ ನಿಂತು
ಕಣ್ಬಿಟ್ಟು ನೋಡಿದರೆ ನಿನಗೆ
ವೀರ ಸೈನಿಕರ ರಕ್ತದಿಂದ
ತಿಳಿಜಲದ ಯಮುನೆ
ಕೆಂಪಾದುದ ಕಂಡೀತು.

ಸುಂದರ ತಾಜಮಹಲೇ
ನಿನ್ನ ಹಕೀಕತ್ತು ಎನೆಂದು
ಎಲ್ಲರಿಗೂ ಗೊತ್ತು.
ನಿನ್ನ ಪ್ರೇಮ ಸ್ಮಾರಕದ
ಮುಸುಕಿನ ಮರೆಯಲ್ಲಿ
ನಿಟ್ಟುಸಿರಿಟ್ಟ ಬೇಗಂಗಳೆಷ್ಟೋ?
ತಲೆದಿಂಬಿನಲ್ಲಿ ಇಂಗಿ ಹೋದ
ಅವರ ಬಿಸಿ ಕಂಬನಿಗಳೆಷ್ಟೋ?
ಉಕ್ಕಿದ ಹರೆಯ ಬಚ್ಚಿಡಲು
ಬಿಕ್ಕಿದ ಜನಾನಾಗಳೇಷ್ಟೋ?
ನಿನ್ನ ಅಡಿಪಾಯದಡಿಯಲ್ಲಿ
ಜಜ್ಜಿ ಹೋಗಿರುವ ಅವಶೇಷಗಳು
ಅಮೃತಶಿಲೆಗಳಲ್ಲಿ ಸಿಲುಕಿ
ನಲುಗಿ ಹೋಗಿರುವ
ಬಡಶಿಲ್ಪಿಗಳ ಆಕ್ರಂದನಗಳೆಷ್ಟೋ
ಹೆಪ್ಪುಗಟ್ಟಿದ ಅವರ ಕನಸುಗಳೆಷ್ಟೋ?
ಅವರ ನಿಟ್ಟುಸಿರಿನ ಶಬ್ದ
ಇಂದಿಗೂ ಸಹ ತಾಜಮಹಲಿನ
ಮಿನಾರುಗಳಲ್ಲಿ ಪ್ರತಿಧ್ವನಿಸುತ್ತದೆ.
ಅಳಿದು ಹೋಗುತ್ತಿರುವ
ಗೋರಿಗಳಲ್ಲಿ ಗುಣುಗುಟ್ಟುತ್ತದೆ.
ನೂಪುರಗಳ ನುಣುಪಾದ
ಗೋಡೆಗಳಲ್ಲಿ ರಕ್ತಸಿಕ್ತವಾಗುತ್ತದೆ.

ನಿನ್ನ ಬಾದಶಹನ ಹೃದಯದಲ್ಲಿ
ನೀನೊಬ್ಬಳೇನೂ ಅಲ್ಲ
ತುಂಬಿದ ಜನಾನಾಗಳುಂಟು
ಮುಜರಾಗಳಲ್ಲಿ ಮುಳುಗುವ
ಗೆಜ್ಜೆಯ ನಾದದಲ್ಲಿ ಮೈಮರವ
ಬಡವರ ರಕ್ತ ಹೀರುವ
ಅನೇಕ ಖೂನಿ ಹಕಿಕತ್ತುಗಳಿಂದ
ಸುತ್ತುವರೆದ ನಿನ್ನ ಬಾದಶಹನ
ತಾಜಮಹಲು ಪ್ರೀತಿಯ ಪ್ರತೀಕ
ಹೇಗಾದೀತು ಹೇಳು ಮುಮ್ತಾಜ್?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಾಲೆಯಕ್ಷರಕ್ಕೂ ಕೃತಕಗೊಬ್ಬರಕ್ಕೂ ಏನಾದರೂ ವ್ಯತ್ಯಾಸವುಂಟಾ?
Next post ಅಡುಗೆ

ಸಣ್ಣ ಕತೆ

  • ಪ್ಲೇಗುಮಾರಿಯ ಹೊಡೆತ

    ಪ್ರಕರಣ ೧೩ ಕೆಲವು ದಿನಗಳ ತರುವಾಯ ತಿಪ್ಪೂರು ಹೋಬಳಿಯ ಪಾಠಶಾಲೆಗಳಿಂದ ಅನಿಷ್ಟ ವರ್ತಮಾನಗಳು ಬರಲಾರಂಭಿಸಿದುವು. ಹಳ್ಳಿಯಲ್ಲಿ ಪ್ಲೇಗುಮಾರಿ ಹೊಕ್ಕಿದೆ; ಒಂದೆರಡು ಸಾವುಗಳಾದುವು; ಜನರೆಲ್ಲ ಹೊಲಗಳಲ್ಲಿ ಗುಡಿಸಿಲುಗಳನ್ನು ಹಾಕಿಕೊಳ್ಳುತ್ತಿದಾರೆ;… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…